ಸಾಂದರ್ಭಿಕ ಚಿತ್ರ 
ರಾಜ್ಯ

ಸಾಮೂಹಿಕ ವಿವಾಹದ ಮೇಲೆ ಕೊರೋನಾ ಕರಿನೆರಳು: ಸರ್ಕಾರದ ಸಪ್ತಪದಿ ಯೋಜನೆ ಮುಂದೂಡಿಕೆ

ರಾಜ್ಯ ಸರ್ಕಾರದ ಮಹತ್ವದ ಸಪ್ತಪದಿ ಯೋಜನೆ ಮೇಲೆ ಕೊರೋನಾ ಕರಿನೆರಳು ಆವರಿಸಿದ್ದು, ಸಾಮೂಹಿಕ ವಿವಾಹ ಯೋಜನೆ ಮುಂದೂಡಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಸಪ್ತಪದಿ ಯೋಜನೆ ಮೇಲೆ ಕೊರೋನಾ ಕರಿನೆರಳು ಆವರಿಸಿದ್ದು, ಸಾಮೂಹಿಕ ವಿವಾಹ ಯೋಜನೆ ಮುಂದೂಡಲಾಗಿದೆ.

ಏಪ್ರಿಲ್ 26 ರಂದು ನಿಗದಿಯಾಗಿದ್ದ ಪ್ರಥಮ ಹಂತದ ಸಪ್ತಪದಿ ಯೋಜನೆಯನ್ನು ಮುಂದೂಡಿರುವುದಾಗಿ ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 26 ರಂದು ಸಪ್ತಪದಿ ಯೋಜನೆಯಡಿ‌ 1.5 ಸಾವಿರ ವಧು ವರರು ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಯೋಜನೆಯಡಿ ಬಡ ವಧು ವರರಿಗೆ ಸರ್ಕಾರದಿಂದ ಉಚಿತ ವಿವಾಹ ಭಾಗ್ಯ ನೀಡಲಾಗುತ್ತಿದ್ದು, ಆದರೀಗ ಕೊರೋನಾದಿಂದ ಸಪ್ತಪದಿ ಯೋಜನೆ ಮುಂದೂಡಿಕೆಯಾಗಿದೆ ಎಂದು ತಿಳಿಸಿದರು.

ಮೇ 26 ರಂದು ಎರಡನೇ ಹಂತದ ಸಪ್ತಪದಿ ಯೋಜನೆಯಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇದ್ದು, ಅದೇ ದಿನ ಮೊದಲ ಮತ್ತು ಎರಡನೇ ಹಂತಗಳನ್ನು ಸೇರಿಸಿ ಒಂದೇ ಹಂತದಲ್ಲಿ ಸಾಮೂಹಿಕ ವಿವಾಹ‌ ಕಾರ್ಯಕ್ರಮ ನಡೆಸಲಾಗುವುದು. ಇದಕ್ಕೆ‌ ಮುಖ್ಯಮಂತ್ರಿಗಳು ಸಹ ಒಪ್ಪಿಗೆ ಸೂಚಿಸಿದ್ದಾರೆ ಎಂದರು ಅವರು ಸ್ಪಷ್ಟಪಡಿಸಿದರು.

ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಎ ದರ್ಜೆಯ ಎಲ್ಲ ದೇವಸ್ಥಾನಗಳಲ್ಲಿ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಮುಜರಾಯಿ ಇಲಾಖೆ ಅಡಿ ಸಂಬಳ ಪಡೆಯುತ್ತಿರುವ ಅರ್ಚಕರಿಗೆ, ಕಲಾವಿದರಿಗೆ ಮತ್ತು ದೇವಾಲಯ ಸ್ವಚ್ಛ ಮಾಡುವ ಸಿಬ್ಬಂದಿಗೆ ಸಂಬಳ ನಿಲ್ಲಿಸದಂತೆ ಸೂಚನೆ ನೀಡಿದ್ದೇನೆ ಎಂದರು.

ಹಲವು ಕಡೆ ಮಂಗಳಾರತಿ ತಟ್ಟೆಗೆ ದಕ್ಷಿಣೆ ಇಲ್ಲದೆ ಹಲವು ಅರ್ಚಕರು ಸಂಕಷ್ಟದಲ್ಲಿ ಇದ್ದಾರೆ. ಇವರಿಗೆ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬ ಚಿಂತನೆ ನಡೆದಿದೆ. ಉಳಿದಂತೆ ರಾಜ್ಯದ ನಾನಾ ದೇವಸ್ಥಾನಗಳಲ್ಲಿ ಆಡಳಿತ ಮಂಡಳಿ‌ ವತಿಯಿಂದಲೇ ರಾಜ್ಯದ 37 ಸಾವಿರ ಮಂದಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT