ಹೈಕೋರ್ಟ್ 
ರಾಜ್ಯ

ಲಾಕ್‌ಡೌನ್‌ ನಡುವೆ ಮದ್ಯ ಮಾರಾಟಕ್ಕೆ ಅನುಮತಿ ಕೋರಿದ್ದ ವೈದ್ಯರಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್!

ಕೊರೋನಾವೈರಸ್ ಹಾವಳಿ ಅತಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ಹಾಕಲಾಗಿದ್ದು ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿದೆ. ಈ ನಡುವೆ ಮದ್ಯವ್ಯಸನಿಗಳ ಹಿತದೃಷ್ಟಿಯಿಂದ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿ ಎಂದು ಹೈಕೋರ್ಟ್ ಗೆ ಅರ್ಜಿ ಹಾಕಿದ್ದ ಹುಬ್ಬಳ್ಳಿ ಮೂಲದ ವೈದ್ಯರೊಬ್ಬರಿಗೆ ನ್ಯಾಯಾಲಯ ಹತ್ತು ಸಾವಿರ ದಂಡ ವಿಧಿಸಿದೆ.

ಬೆಂಗಳೂರು: ಕೊರೋನಾವೈರಸ್ ಹಾವಳಿ ಅತಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ಹಾಕಲಾಗಿದ್ದು ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿದೆ. ಈ ನಡುವೆ ಮದ್ಯವ್ಯಸನಿಗಳ ಹಿತದೃಷ್ಟಿಯಿಂದ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿ ಎಂದು ಹೈಕೋರ್ಟ್ ಗೆ ಅರ್ಜಿ ಹಾಕಿದ್ದ ಹುಬ್ಬಳ್ಳಿ ಮೂಲದ ವೈದ್ಯರೊಬ್ಬರಿಗೆ ನ್ಯಾಯಾಲಯ ಹತ್ತು ಸಾವಿರ ರೂ. ದಂಡ ವಿಧಿಸಿದೆ.

ಮುಖ್ಯ ನ್ಯಾ. ಎ.ಎಸ್.ಒಕಾ, ನ್ಯಾ.ಬಿ.ವಿ.ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವೈದ್ಯರ ಅರ್ಜಿಯನ್ನು ವಜಾ ಮಾಡಿ 10 ಸಾವಿರ ರೂ. ದಂಡ ವಿಧಿಸಿದೆ.

ಹುಬ್ಬಳ್ಳಿಯ ಖ್ಯಾತ ಮನೋವೈದ್ಯರಾದ ವಿನೋದ್ ಕುಲಕರ್ಣಿ ಲಾಕ್‍ಡೌನ್ ಹೇರಲಾಗಿರುವ ಸಮಯದಲ್ಲಿ ದೇಶಾದ್ಯಂತ ಮದ್ಯ ಮಾರಾಟ ನಿಷೇಧವಿದ್ದು ಕರ್ನಾಟಕದಲ್ಲಿ ಈ ನಿಷೇಧವನ್ನು ತೆರವು ಮಾಡಬೇಕೆಂದು ಪಿಐಎಲ್ ಮೂಲಕ ಮನವಿ ಸಲ್ಲಿಸಿದರು.

ಇಂತಹ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜನರು ತಮ್ಮ ಆರೋಗ್ಯಗಳ ಬಗೆಗೆ ಕಾಳಜಿ ವಹಿಸಿಕೊಳ್ಳಬೇಕು. ಅಂತಹುದರಲ್ಲಿ ವೈದ್ಯರಾಗಿ ಮದ್ಯಪಾನಿಗಳ ಪರ ಅರ್ಜಿ ಸಲ್ಲಿಸಿದ್ದು ಸರಿಯಲ್ಲ ಎಂದು ನ್ಯಾಯಪೀಠ ಅಸಮಾಧಾನ ಹೊರಹಾಕಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!