ಹೈಕೋರ್ಟ್ 
ರಾಜ್ಯ

ಲಾಕ್‌ಡೌನ್‌ ನಡುವೆ ಮದ್ಯ ಮಾರಾಟಕ್ಕೆ ಅನುಮತಿ ಕೋರಿದ್ದ ವೈದ್ಯರಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್!

ಕೊರೋನಾವೈರಸ್ ಹಾವಳಿ ಅತಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ಹಾಕಲಾಗಿದ್ದು ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿದೆ. ಈ ನಡುವೆ ಮದ್ಯವ್ಯಸನಿಗಳ ಹಿತದೃಷ್ಟಿಯಿಂದ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿ ಎಂದು ಹೈಕೋರ್ಟ್ ಗೆ ಅರ್ಜಿ ಹಾಕಿದ್ದ ಹುಬ್ಬಳ್ಳಿ ಮೂಲದ ವೈದ್ಯರೊಬ್ಬರಿಗೆ ನ್ಯಾಯಾಲಯ ಹತ್ತು ಸಾವಿರ ದಂಡ ವಿಧಿಸಿದೆ.

ಬೆಂಗಳೂರು: ಕೊರೋನಾವೈರಸ್ ಹಾವಳಿ ಅತಿಯಾಗಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ 21 ದಿನಗಳ ಲಾಕ್‌ಡೌನ್‌ ಹಾಕಲಾಗಿದ್ದು ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಿದೆ. ಈ ನಡುವೆ ಮದ್ಯವ್ಯಸನಿಗಳ ಹಿತದೃಷ್ಟಿಯಿಂದ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿ ಎಂದು ಹೈಕೋರ್ಟ್ ಗೆ ಅರ್ಜಿ ಹಾಕಿದ್ದ ಹುಬ್ಬಳ್ಳಿ ಮೂಲದ ವೈದ್ಯರೊಬ್ಬರಿಗೆ ನ್ಯಾಯಾಲಯ ಹತ್ತು ಸಾವಿರ ರೂ. ದಂಡ ವಿಧಿಸಿದೆ.

ಮುಖ್ಯ ನ್ಯಾ. ಎ.ಎಸ್.ಒಕಾ, ನ್ಯಾ.ಬಿ.ವಿ.ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವೈದ್ಯರ ಅರ್ಜಿಯನ್ನು ವಜಾ ಮಾಡಿ 10 ಸಾವಿರ ರೂ. ದಂಡ ವಿಧಿಸಿದೆ.

ಹುಬ್ಬಳ್ಳಿಯ ಖ್ಯಾತ ಮನೋವೈದ್ಯರಾದ ವಿನೋದ್ ಕುಲಕರ್ಣಿ ಲಾಕ್‍ಡೌನ್ ಹೇರಲಾಗಿರುವ ಸಮಯದಲ್ಲಿ ದೇಶಾದ್ಯಂತ ಮದ್ಯ ಮಾರಾಟ ನಿಷೇಧವಿದ್ದು ಕರ್ನಾಟಕದಲ್ಲಿ ಈ ನಿಷೇಧವನ್ನು ತೆರವು ಮಾಡಬೇಕೆಂದು ಪಿಐಎಲ್ ಮೂಲಕ ಮನವಿ ಸಲ್ಲಿಸಿದರು.

ಇಂತಹ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜನರು ತಮ್ಮ ಆರೋಗ್ಯಗಳ ಬಗೆಗೆ ಕಾಳಜಿ ವಹಿಸಿಕೊಳ್ಳಬೇಕು. ಅಂತಹುದರಲ್ಲಿ ವೈದ್ಯರಾಗಿ ಮದ್ಯಪಾನಿಗಳ ಪರ ಅರ್ಜಿ ಸಲ್ಲಿಸಿದ್ದು ಸರಿಯಲ್ಲ ಎಂದು ನ್ಯಾಯಪೀಠ ಅಸಮಾಧಾನ ಹೊರಹಾಕಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT