ಸಾಂದರ್ಭಿಕ ಚಿತ್ರ 
ರಾಜ್ಯ

ಏಪ್ರಿಲ್ 5: ರಾಜ್ಯದಲ್ಲಿ ಆ 9 ನಿಮಿಷ ವಿದ್ಯುತ್ ಬಳಕೆಯಲ್ಲಿ 1200 ಮೆಗಾ ವ್ಯಾಟ್ ಇಳಿಕೆ!

ಕೊರೋನಾ ವಿರುದ್ಧದ ಹೋರಾಟದ ಸಲುವಾಗಿ ಪ್ರಧಾನಿ ನರೇಂದರ ಮೋದಿ ಕರೆ ಕೊಟ್ಟಿದ್ದ ದೀಪ ಬೆಳಗುವ ಕಾರ್ಯಕ್ರಮದಿಂದಾಗಿ 1200 ಮೆಗಾ ವ್ಯಾಟ್ ವಿದ್ಯುತ್ ಬಳಕೆ ಕಡಿಮೆಯಾಗಿದೆ.

ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟದ ಸಲುವಾಗಿ ಪ್ರಧಾನಿ ನರೇಂದರ ಮೋದಿ ಕರೆ ಕೊಟ್ಟಿದ್ದ ದೀಪ ಬೆಳಗುವ ಕಾರ್ಯಕ್ರಮದಿಂದಾಗಿ  1200 ಮೆಗಾ ವ್ಯಾಟ್ ವಿದ್ಯುತ್ ಬಳಕೆ ಕಡಿಮೆಯಾಗಿದೆ.

ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ಮನೆಗಳಲ್ಲಿ ವಿದ್ಯುತ್ ಆಫ್ ಮಾಡಿದ್ದರಿಂದ ಇಷ್ಟು ಪ್ರಮಾಣದಲ್ಲಿ ವಿದ್ಯುತ್ ಬಳಕೆ ಕಡಿಮೆಯಾಗಿದೆ ಎಂದು ಇಂಧನ ಇಲಾಖೆ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ತಿಳಿಸಿದ್ದಾರೆ.

ನಾವು ಅಂದಾಜು ಮಾಡಿದ್ದಕ್ಕಿಂತ ಕಡಿಮೆ ಪ್ರಮಾಣದಲ್ಲಿ ವಿದ್ಯುತ್ ಬಳಕೆ ಕಡಿಮೆಯಾಗಿದೆ. ಸುಮಾರು 7000 ಮೆಗಾ ವ್ಯಾಟ್ ವಿದ್ಯುತ್ ಉಳಿತಾಯವಾಗುತ್ತದೆ ಎಂದು ಯೋಜಿಸಲಾಗಿತ್ತು ಆದರೆ ಕೇವಲ 700-800 ಮೆಗಾ ವ್ಯಾಟ್ ಮಾತ್ರ ಕಡಿಮೆಯಾಗಿರುವುದು ಇಂಧನ ಇಲಾಖೆಗೆ ಅಚ್ಚರಿ ಮೂಡಿಸಿದೆ.

ಸಾಮಾನ್ಯವಾಗಿ ಪ್ರತಿದಿನ ರಾಜ್ಯದ ಜನರ ವಿದ್ಯುತ್ ಬಳಕೆ,7257 ಮೆಗಾ ವ್ಯಾಟ್ ಇರುತ್ತಿತ್ತು, ಆದರೆ 9 ನಿಮಿಷ ಲೈಟ್ ಆಫ್ ಮಾಡಿದ್ದಕ್ಕೆ 6,121 ಮೆಗಾ ವ್ಯಾಟ್ ಗೆ ಇಳಿದಿದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT