ಕೋಳಿ ಕಾಳಗ 
ರಾಜ್ಯ

ಉಡುಪಿ: ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜು ಕಟ್ಟಿದ್ದ ಏಳು ಜನರ ಬಂಧನ

ಜಿಲ್ಲೆಯ ಕಾವಡಿ ಮಹಲಿಂಗೇಶ್ವರ ದೇವಸ್ಥಾನ ಮೈದಾನದಲ್ಲಿ ನಡೆದಿದ್ದ ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜಾಡುತ್ತಿದ್ದ 7 ಜನರನ್ನು ಕೋಟಾ ಪೊಲೀಸರು ಬಂಧಿಸಿ ಅವರಿಂದ 1.72 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 

ಉಡುಪಿ: ಜಿಲ್ಲೆಯ ಕಾವಡಿ ಮಹಲಿಂಗೇಶ್ವರ ದೇವಸ್ಥಾನ ಮೈದಾನದಲ್ಲಿ ನಡೆದಿದ್ದ ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜಾಡುತ್ತಿದ್ದ 7 ಜನರನ್ನು ಕೋಟಾ ಪೊಲೀಸರು ಬಂಧಿಸಿ ಅವರಿಂದ 1.72 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ಮಧುಕರ್ (33), ಜಯರಾಮ್ ಶೆಟ್ಟಿ (49), ಪ್ರಶಾಂತ್ (42), ರಾಘವೇಂದ್ರ (39), ಲೋಕೇಶ್ ಬಾರ್ಕೂರ್ (35), ಸುಧಾಕರ್ (39) ಮತ್ತು ಸುಕೇತ್ (29) ಎಂದು ಗುರುತಿಸಲಾಗಿದೆ. 

ನಿರ್ದಿಷ್ಟ ಮಾಹಿತಿಯಂತೆ ಪೊಲೀಸರು ಆ ಪ್ರದೇಶದ ಮೇಲೆ ದಾಳಿ ನಡೆಸಿ ಸೋಮವಾರ ಸಂಜೆ ಈ ಏಳು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 6,880 ರೂ. ನಗದು, ಎರಡು ಹುಂಜಗಳು ಹಾಗೂ ಎಂಟು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸ್ಥಳದಿಂದ ಇಬ್ಬರು ವ್ಯಕ್ತಿಗಳು ತಮ್ಮ ವಾಹನಗಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. 

ಪ್ರಾಣಿಗಳ ಮೇಲಿನ ಕ್ರೌರ್ಯ ಕಾಯ್ದೆಯಡಿ ಮತ್ತು ಕೋಳಿಅಂಕ ವಿರುದ್ಧ ಸುಪ್ರೀಂಕೋರ್ಟ್‍ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕೋಳಿಅಂಕ ಜೂಜಾಟವಾಗಿದ್ದು, ಇದರಲ್ಲಿ ಕೋಳಿಗಳ ಕಾಲುಗಳಿಗೆ ಹರಿತ ಚಾಕುಗಳನ್ನು ಕಟ್ಟಲಾಗುತ್ತದೆ. ಕೋಳಿಗಳು ಪರಸ್ಪರ ಹೊಡದಾಡಿಕೊಳ್ಳುವಾಗ ಚಾಕುವಿನಿಂದ ತೀವ್ರವಾಗಿ ಗಾಯಗೊಂಡ ಕೋಳಿ ಸೋಲನ್ನಪ್ಪುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT