ನೀರಜ್ ಪಾಟೀಲ್ 
ರಾಜ್ಯ

ಲಂಡನ್ ಮಾಜಿ ಮೇಯರ್ ಕನ್ನಡಿಗ ನೀರಜ್ ಪಾಟೀಲ್ ಕೊರೋನಾ ಸೋಂಕು

ಇಂಗ್ಲೆಂಡ್‌ನ‌ ಲ್ಯಾಂಬೆತ್‌ ನಗರದ ಮಾಜಿ ಮೇಯರ್‌ ಕನ್ನಡಿಗ ನೀರಜ್‌ ಪಾಟೀಲ್‌ ಅವರಿಗೆ ಕೋವಿಡ್ 19 ಸೋಂಕು ತಗಲಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನೀರಜ್‌ ಪಾಟೀಲ್‌ ಹೇಳಿ ಕೊಂಡಿದ್ದು, ಈ ವೈರಸ್‌ನಿಂದ ಗುಣಮುಖರಾಗಲು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದು, ಹೋಂ ಕ್ವಾರಂಟೈನ್‌ ಆಗಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು: ಇಂಗ್ಲೆಂಡ್‌ನ‌ ಲ್ಯಾಂಬೆತ್‌ ನಗರದ ಮಾಜಿ ಮೇಯರ್‌ ಕನ್ನಡಿಗ ನೀರಜ್‌ ಪಾಟೀಲ್‌ ಅವರಿಗೆ ಕೋವಿಡ್ 19 ಸೋಂಕು ತಗಲಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನೀರಜ್‌ ಪಾಟೀಲ್‌ ಹೇಳಿ ಕೊಂಡಿದ್ದು, ಈ ವೈರಸ್‌ನಿಂದ ಗುಣಮುಖರಾಗಲು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದು, ಹೋಂ ಕ್ವಾರಂಟೈನ್‌ ಆಗಿರುವುದಾಗಿ ತಿಳಿಸಿದ್ದಾರೆ.

ಈ ರೋಗದ ಬಗ್ಗೆ ಆರಂಭದಲ್ಲಿ ನಿರ್ಲಕ್ಷ್ಯ ಮಾಡಿರುವುದು ಸೋಂಕು ತಗುಲಲು ಕಾರಣವಾಗಿರಬಹುದು. ಆದರೆ ಈಗ ಹೋಂ ಕ್ವಾರಂಟೈನ್‌ ಮಾಡಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಈ ವೈರಸ್‌ನಿಂದ ಹೊರ ಬರಲು ಪ್ರಯತ್ನಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಬಹುಶಃ ನಾನು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದರಲ್ಲಿ ವಿಫಲನಾಗಿದ್ದೇನೆ ಎನಿಸುತ್ತದೆ. ನಾನು ಸದಾ ಜಿಮ್ ಮಾಡುತ್ತಿದ್ದೆ, ಡಯಟ್ ಮಾಡುತ್ತಿದ್ದೆ. ಹೀಗಾಗಿ ನನ್ನಲ್ಲಿ ರೋಗ ನಿರೋಧಕ ಶಕ್ತಿ ಚೆನ್ನಾಗಿದೆ. ನಾನು ಆದಷ್ಟು ಬೇಗ ಗುಣಮುಖನಾಗಿ ಮತ್ತೆ ಕರ್ತವ್ಯಕ್ಕೆ ವಾಪಸ್ಸಾಗುತ್ತೇನೆ ಎಂದು ನೀರಜ್ ಹೇಳಿಕೊಂಡಿದ್ದಾರೆ.

ಸ್ವತಃ ವೈದ್ಯರಾಗಿರುವ ನೀರಜ್ ಪಾಟೀಲ್ ಅವರು ರೋಗಿಗಳಿಗೆ ಚಿಕಿತ್ಸೆ ನೀಡುವಾಗ ಸೋಂಕಿಗೆ ತುತ್ತಾಗಿದ್ದಾರೆ ಎನ್ನಲಾಗಿದೆ. ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಸ್ವತಃ ನೀರಜ್ ಅವರೇ ಪ್ರತಿಕ್ರಿಯಿಸಿದ್ದಾರೆ. ನಾನು ತೀವ್ರ ಚಳಿ ಜ್ವರ ಹಾಗೂ ಚೆಸ್ಟ್ ಇನ್‍ಫೆಕ್ಷನ್‍ನಿಂದ ಬಳಲುತ್ತಿದ್ದೇನೆ. ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೀಗಾಗಿ ಸೆಲ್ಫ್ ಇಸೋಲೇಷನ್‍ನಲ್ಲಿ ಇದ್ದೇನೆ. ಎಲ್ಲರಿಂದ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದೇನೆ. ನನಗೆ ಈ ಸೋಂಕು ತಗುಲುತ್ತದೆ ಎಂದು ಕನಸಲ್ಲೂ ನಾನು ಊಹಿಸಿರಲಿಲ್ಲ ಎಂದು ಹೇಳಿದ್ದಾರೆ. ಶೀಘ್ರವೇ ಗುಣಮುಖವಾಗಿ ವಾಪಾಸಾಗುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT