ಕಳ್ಳಭಟ್ಟಿ ತಯಾರಿಸುತ್ತಿದ್ದವನ ಬಂಧನ 
ರಾಜ್ಯ

ಕಳ್ಳಭಟ್ಟಿ ಕುಡಿದರೆ ಕೊರೋನಾ ಬರಲ್ಲ ಎಂದು ಸುಳ್ಳು ಸುದ್ದಿ ಹರಡಿ ಕಳ್ಳಭಟ್ಟಿ ತಯಾರಿಸುತ್ತಿದ್ದವನ ಬಂಧನ

ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲವೆಂದು ಕಳ್ಳಭಟ್ಟಿ ತಯಾರಿಸುತ್ತಿದ್ದವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಹನೂರು ತಾಲೂಕಿನ ದೊರೆದೊಡ್ಡಿ ಗ್ರಾಮದಲ್ಲಿ ನಡೆದಿದೆ.ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲ ಎಂದು ಕಳ್ಳು ತಯಾರಿಸುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ: ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲವೆಂದು ಕಳ್ಳಭಟ್ಟಿ ತಯಾರಿಸುತ್ತಿದ್ದವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಹನೂರು ತಾಲೂಕಿನ ದೊರೆದೊಡ್ಡಿ ಗ್ರಾಮದಲ್ಲಿ ನಡೆದಿದೆ.ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲ ಎಂದು ಕಳ್ಳು ತಯಾರಿಸುತ್ತಿದ್ದವನನ್ನು  ಪೊಲೀಸರು ಬಂಧಿಸಿದ್ದಾರೆ. 

ಬಂಧಿತನನ್ನು ಭೀಮನಾಯ್ಕ ಎಂದು ಗುರುತಿಸಲಾಗಿದ್ದು, ಕಳ್ಳಭಟ್ಟಿ ಕುಡಿದರೆ ಕೊರೊನಾ ಬರಲ್ಲವೆಂದು ಬೆಲ್ಲದ ಕೊಳೆ, ಮರದ ಚಕ್ಕೆಯನ್ನು ಜಮೀನನಲ್ಲಿ ಶೇಖರಿಸಿದ್ದಾನೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕೊಳ್ಳೇಗಾಲ ಅಬಕಾರಿ ಸಿಪಿಐ ಮೀನಾ ನೇತೃತ್ವದ ತಂಡ ದಾಳಿ ನಡೆಸಿ ಮಾಲು  ವಶಕ್ಕೆ ಪಡೆದಿದೆ.

ಕಳೆದ ಮೂರೂವರೆ ವರ್ಷಗಳಿಂದ ಜಿಲ್ಲೆಯಲ್ಲಿ ಕಳ್ಳಭಟ್ಟಿ ಪ್ರಕರಣಗಳು ನಡೆದಿರಲಿಲ್ಲ. ಲಾಕ್​ಡೌನ್​​ನಿಂದ ಮದ್ಯಕ್ಕೆ ಎಣ್ಣೆಪ್ರಿಯರು ಪರದಾಡುತ್ತಿರುವುದರಿಂದ ಕೊರೋನಾ ನೆಪವೊಡ್ಡಿ ಕಳ್ಳಭಟ್ಟಿ ತಯಾರಿಕೆಗೆ ಆರೋಪಿ ಮುಂದಾಗಿದ್ದ ಎಂದು ತಿಳಿದುಬಂದಿದೆ. ಕಾರ್ಯಾಚರಣೆಯಲ್ಲಿ 90 ಲೀ.  ಬೆಲ್ಲದ ಕೊಳೆ, 6-7 ಚೀಲ ಮರದ ಚಕ್ಕೆಯನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ವರದಿ ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT