ಮೈಸೂರು ಜಿಲ್ಲಾ ಉಸ್ತುವಾರಿ ಎಸ್. ಟಿ. ಸೋಮಶೇಖರ್ 
ರಾಜ್ಯ

ಮೈಸೂರು ನಗರ ಪ್ರದಕ್ಷಿಣೆ ನಡೆಸಿದ ನೂತನ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌

ಸಹಕಾರ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಇಂದು ಬೆಳ್ಳಂಬೆಳಗ್ಗೆ ಮೈಸೂರು ನಗರ ಪ್ರದಕ್ಷಿಣೆ ಹಾಕಿದರು.

ಮೈಸೂರು: ಸಹಕಾರ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಇಂದು ಬೆಳ್ಳಂಬೆಳಗ್ಗೆ ಮೈಸೂರು ನಗರ ಪ್ರದಕ್ಷಿಣೆ ಹಾಕಿದರು.

ಎಪಿಎಂಸಿಗೆ ಭೇಟಿ ನೀಡಿ ರೈತರು ಹಾಗೂ ವರ್ತಕರ ಅಹವಾಲು ಆಲಿಸಿದ ಸಚಿವರು, ಕೊರೋನಾ ಸೋಂಕು ನಿವಾರಕ ಟನಲ್ ಅನ್ನು ಉದ್ಘಾಟನೆ ಮಾಡಿದರು. 

ಪೊಲೀಸರು ಸೇರಿದಂತೆ ಯಾರಿಂದಲೂ ರೈತರಿಗೆ ಸಮಸ್ಯೆ ಆಗಬಾರದು ಎಂಬುದು ಮುಖ್ಯಮಂತ್ರಿಗಳ ಉದ್ದೇಶ ಸಹ. ಹೀಗಾಗಿ ಖುದ್ದು ನಾನೇ ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಸೂಚಿಸುತ್ತಿದ್ದೇನೆ. ಎಪಿಎಂಸಿಗೆ ಶೀಥಲೀಕರಣ ಘಟಕ ಸ್ಥಾಪಿಸುವ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದು ಕ್ರಮ‌ ಕೈಗೊಳ್ಳಲಾಗುವುದು.ರೈತರಿಗೆ ಸರಿಯಾದ ಬೆಂಬಲ ಬೆಲೆ ಸಿಗದಿರುವ ತರಕಾರಿಗಳನ್ನ ಸರ್ಕಾರದಿಂದಲೇ ಖರೀದಿ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ‌ ಎಂದರು.

ಇದಕ್ಕೂ ಮುನ್ನ ಇಲ್ಲಿನ ಸುತ್ತೂರು ಮಠಕ್ಕೆ ಭೇಟಿ ಕೊಟ್ಟು ಜಗದ್ಗುರು ಶ್ರೀ ಶಿವರಾತ್ರಿದೇಶೀಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಮಾಜಿ ಸಚಿವ ಎಚ್. ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ ಜೊತೆಗಿದ್ದರು.ಬಳಿಕ ಸುತ್ತೂರು ಮಠದ ಮೈಸೂರು ಶಾಖೆಗೆ ಸಚಿವರು ಭೇಟಿ ನೀಡಿ ಜಗದ್ಗುರು ಶಿವರಾತ್ರಿದೇಶೀಕೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿದ ಸ್ವಾಮೀಜಿ, ಕೊರೋನಾ ಸೋಂಕು ಆದಷ್ಟು ಬೇಗ ತೊಲಗಬೇಕು. ಸರ್ಕಾರ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಶ್ಲಾಘಿಸಿದರು.

ಬಳಿಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮೈಸೂರು ಚಾಮರಾಜನಗರ ಜಿಲ್ಲಾ ವೀರಶೈವ ಮಠಾಧಿಪತಿಗಳ ಗೋಷ್ಠಿಯ ಮಠಾಧಿಪತಿಗಳು ನೀಡಿರುವ ದೇಣಿಗೆ 1.50 ಲಕ್ಷ ರೂ. ಚೆಕ್‌ ಅನ್ನು ಸುತ್ತೂರು ಶಿವರಾತ್ರಿ ದೇಶೀಕೇಂದ್ರ ಜಗದ್ಗುರುಗಳ ಸಮ್ಮುಖದಲ್ಲಿ ಸಹಕಾರ ಸಚಿವರಿಗೆ ಹಸ್ತಾಂತರ ಮಾಡಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ: ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವು- ಸದ್ಗುರು

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?