ರಾಜ್ಯ

ಕೊರೋನಾ ಲಾಕ್ ಡೌನ್ ಹಿನ್ನೆಲೆ: ಧರ್ಮಸ್ಥಳ ವಿಷು ಜಾತ್ರೆ, ರಥೋತ್ಸವ ರದ್ದು

Raghavendra Adiga

ಬೆಳ್ತಂಗಡಿ: ದೇಶಾದ್ಯಂತ ಕೊರೋನಾ ಲಾಕ್ ಡೌನ್ ಇರುವ ಕಾರಣ ಪ್ರಸಿದ್ದ ತೀರ್ಥ ಕ್ಷೇತ್ರವಾದ ಧರ್ಮಸ್ಥಳದಲ್ಲಿ ನಡೆಯಲಿದ್ದ ವಿಷು ಜಾತ್ರೆ, ನೇಮ ಕೋಲ ಹಾಗೂ ರಥೋತ್ಸವಗಳನ್ನು ರದ್ದು ಮಾಡಲಾಗಿದೆ.

ದೇವಪ್ರಶ್ನೆಯ ಮೂಲಕ ಪರಿಶೀಲಿಸಲಾಗಿ ವಿಷು ಜಾತ್ರೆ, ನೇಮ ಕೋಲ, ರಥೋತ್ಸವ ಇತ್ಯಾದಿ ಪೂರಕ  ಧಾರ್ಮಿಕ ಕಾರ್ಯಕ್ರಮಗಳೆಲ್ಲವನ್ನೂ ರದ್ದುಪಡಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಸಾಂಪ್ರದಾಯಿಕವಾಗಿ ನಡೆಯುವ ಧರ್ಮದೇವತೆಗಳ, ಶ್ರೀ ಅಣ್ಣಪ್ಪ ಸ್ವಾಮಿ ನೇಮ್ ಅಕೋಲಗಳು ಮುಂದೆ ಐದು ದಿನಗಳ ಕಾಲ ನಡೆಯಬೇಕಿದ್ದ ಮಂಜುನಾಥಸ್ವಾಮಿ ರಥೋತ್ಸವ ಸೇರಿದಂತೆ ಎಲ್ಲಾ ಆಚರಣೆಗಳನ್ನು ರದ್ದು ಮಾಡಲಾಗಿದೆ.

SCROLL FOR NEXT