ಸಂಗ್ರಹ ಚಿತ್ರ 
ರಾಜ್ಯ

ಏ.12ರಿಂದ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೋವಿಡ್ ಸಮೀಕ್ಷೆ ಆರಂಭ

ನಗರದ ಎಲ್ಲಾ ಜಿಲ್ಲೆಗಳಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಸಮೀಕ್ಷೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. 

ಬೆಂಗಳೂರು: ನಗರದ ಎಲ್ಲಾ ಜಿಲ್ಲೆಗಳಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಸಮೀಕ್ಷೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. 

ಸಮೀಕ್ಷಾ ಕಾರ್ಯವನ್ನು ಬೆಂಗಳೂರು ನಗರ ಜಿಲ್ಲಾ ಆಡಳಿತ ಮಂಡಳಿಗಳು ನಡೆಸುತ್ತಿದ್ದು, ಏಪ್ರಿಲ್ 12 ರಿಂದ ಈ ಸಮೀಕ್ಷೆ ಆರಂಭವಾಗಲಿದೆ. ಆಶಾ ಕಾರ್ಯಕರ್ತೆಯರು ಹಾಗೂ ಅಂಗವಾಡಿಯವರಿಗೆ ಸಮೀಕ್ಷಾ ಕಾರ್ಯ ನಡೆಸಲಿದ್ದಾರೆ. 

ಏಪ್ರಿಲ್ ಅಂತ್ಯದವರೆಗೂ ಸಮೀಕ್ಷೆ ನಡೆಯಲಿದ್ದು, ಪ್ರತೀನಿತ್ಯ 60,000 ಮನೆಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಉಪ ಆಯುಕ್ತ ಜಿಎನ್ ಶಿವಮೂರ್ತಿಯವರು ಹೇಳಿದ್ದಾರೆ. 

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಶಾಲಾ ಶಿಕ್ಷಕರನ್ನೊಳಗೊಂಡ ತಂಡಗಳನ್ನು ಈಗಾಗಲೇ ರಚನೆ ಮಾಡಲಾಗಿದ್ದು, ಭಾನುವಾರದಿಂದ ಈ ಸಮೀಕ್ಷಾ ಕಾರ್ಯ ನಡೆಯಲಿದೆ. ಸಮೀಕ್ಷೆ ನಡೆಸಲು ಬರುವ ಸಿಬ್ಬಂದಿಗಲು ಮನೆಯಲ್ಲಿ ಕೊರೋನಾ ಲಕ್ಷಣಗಳು ಯಾರಿಗಾದರೂ ಇವೆಯೇ ಎಂದು ಪ್ರಶ್ನಿಸುತ್ತಾರೆ. ಅಲ್ಲದೆ, ಒಂದು ವೇಳೆ ಬಂದಿದ್ದೇ ಆದರೆ, ಏನನ್ನು ಮಾಡಬೇಕು, ಏನನ್ನು ಮಾಡಬಾರದು ಎಂಬುದನ್ನು ತಿಳಿಸುತ್ತಾರೆ. 

ಅಲ್ಲದೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸುವ ವಿವರಗಳಿರುವ ಭಿತ್ತಿಪತ್ರಗಳನ್ನೂ ಕೂಡ ಇದೇ ವೇಳೆ ಸಮೀಕ್ಷೆ ನಡೆಸುವ ಮನೆಗಳಿಗೆ ನೀಡಲಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT