ಸಂಗ್ರಹ ಚಿತ್ರ 
ರಾಜ್ಯ

ಏ.12ರಿಂದ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೋವಿಡ್ ಸಮೀಕ್ಷೆ ಆರಂಭ

ನಗರದ ಎಲ್ಲಾ ಜಿಲ್ಲೆಗಳಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಸಮೀಕ್ಷೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. 

ಬೆಂಗಳೂರು: ನಗರದ ಎಲ್ಲಾ ಜಿಲ್ಲೆಗಳಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಸಮೀಕ್ಷೆ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. 

ಸಮೀಕ್ಷಾ ಕಾರ್ಯವನ್ನು ಬೆಂಗಳೂರು ನಗರ ಜಿಲ್ಲಾ ಆಡಳಿತ ಮಂಡಳಿಗಳು ನಡೆಸುತ್ತಿದ್ದು, ಏಪ್ರಿಲ್ 12 ರಿಂದ ಈ ಸಮೀಕ್ಷೆ ಆರಂಭವಾಗಲಿದೆ. ಆಶಾ ಕಾರ್ಯಕರ್ತೆಯರು ಹಾಗೂ ಅಂಗವಾಡಿಯವರಿಗೆ ಸಮೀಕ್ಷಾ ಕಾರ್ಯ ನಡೆಸಲಿದ್ದಾರೆ. 

ಏಪ್ರಿಲ್ ಅಂತ್ಯದವರೆಗೂ ಸಮೀಕ್ಷೆ ನಡೆಯಲಿದ್ದು, ಪ್ರತೀನಿತ್ಯ 60,000 ಮನೆಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಉಪ ಆಯುಕ್ತ ಜಿಎನ್ ಶಿವಮೂರ್ತಿಯವರು ಹೇಳಿದ್ದಾರೆ. 

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಶಾಲಾ ಶಿಕ್ಷಕರನ್ನೊಳಗೊಂಡ ತಂಡಗಳನ್ನು ಈಗಾಗಲೇ ರಚನೆ ಮಾಡಲಾಗಿದ್ದು, ಭಾನುವಾರದಿಂದ ಈ ಸಮೀಕ್ಷಾ ಕಾರ್ಯ ನಡೆಯಲಿದೆ. ಸಮೀಕ್ಷೆ ನಡೆಸಲು ಬರುವ ಸಿಬ್ಬಂದಿಗಲು ಮನೆಯಲ್ಲಿ ಕೊರೋನಾ ಲಕ್ಷಣಗಳು ಯಾರಿಗಾದರೂ ಇವೆಯೇ ಎಂದು ಪ್ರಶ್ನಿಸುತ್ತಾರೆ. ಅಲ್ಲದೆ, ಒಂದು ವೇಳೆ ಬಂದಿದ್ದೇ ಆದರೆ, ಏನನ್ನು ಮಾಡಬೇಕು, ಏನನ್ನು ಮಾಡಬಾರದು ಎಂಬುದನ್ನು ತಿಳಿಸುತ್ತಾರೆ. 

ಅಲ್ಲದೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸುವ ವಿವರಗಳಿರುವ ಭಿತ್ತಿಪತ್ರಗಳನ್ನೂ ಕೂಡ ಇದೇ ವೇಳೆ ಸಮೀಕ್ಷೆ ನಡೆಸುವ ಮನೆಗಳಿಗೆ ನೀಡಲಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT