ಗೋವಾದಲ್ಲಿ ಅತಂತ್ರ ಸಿಲುಕಿರುವ ಕನ್ನಡಿಗರ ಕುಟುಂಬ 
ರಾಜ್ಯ

ಗೋವಾದಲ್ಲಿ ಕರುನಾಡ ಕುಟುಂಬದ ಪರದಾಟ: ವಿಡಿಯೋ ಮೂಲಕ ಸಹಾಯಕ್ಕೆ ಮನವಿ

ಕೊರೋನಾ ಎಫೆಕ್ಟ್ ಹೊರನಾಡಿನಲ್ಲಿರುವ ಕನ್ನಡಿಗರಿಗೆ ತಟ್ಟಿದ್ದು, ಉದ್ಯೋಗ ಅರಿಸಿ ಗೋವಾಕ್ಕೆ ಹೋಗಿರುವ ಮೂರು ಕುಟುಂಬಗಳಿಗೆ ಅನ್ನ, ಆಶ್ರಯಕ್ಕಾಗಿ ಪರದಾಡುವಂತಾಗಿದೆ.

ರಾಯಬಾಗ: ಕೊರೋನಾ ಎಫೆಕ್ಟ್ ಹೊರನಾಡಿನಲ್ಲಿರುವ ಕನ್ನಡಿಗರಿಗೆ ತಟ್ಟಿದ್ದು, ಉದ್ಯೋಗ ಅರಿಸಿ ಗೋವಾಕ್ಕೆ ಹೋಗಿರುವ ಮೂರು ಕುಟುಂಬಗಳಿಗೆ ಅನ್ನ, ಆಶ್ರಯಕ್ಕಾಗಿ ಪರದಾಡುವಂತಾಗಿದೆ.

ತಾಲೂಕಿನ ನಿಡಗುಂದಿ ಗ್ರಾಮ ಲಕ್ಷ್ಮಣ ಭಜಂತ್ರಿ ಕುಟುಂಬ ಸೇರಿದಂತೆ ಮೂರು ಕುಟುಂಬಗಳು ಉದ್ಯೋಗವನ್ನು ಅರಿಸಿಕೊಂಡು ಗೋವಾಕ್ಕೆ ಹೋಗಿದ್ದು, ಈಗ ಕೊರೋನಾ ಎಫೆಕ್ಟ್ ನಿಂದ ದೇಶದ್ಯಾಂತ ಲಾಕ್‌ಡೌನ್ ಇರುವುದರಿಂದ ಗೋವಾದಲ್ಲಿ ಅನ್ನ, ಆಶ್ರಯವಿಲ್ಲದೇ ಪರದಾಡುತ್ತಿದ್ದು,  ತಮಗೆ ಸಹಾಯ ಮಾಡುವಂತೆ ಕುಡಚಿ ಶಾಸಕ ಪಿ.ರಾಜೀವ ಅವರಿಗೆ ವಿಡಿಯೋ ಮೂಲಕ ಸಹಾಯ ಕೋರಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ತಾಲೂಕಿನ ಬಹಳಷ್ಟು ಬಡ ಕುಟುಂಬಗಳು ತಮ್ಮ ಹೊಟ್ಟಿಪಾಡಿಗಾಗಿ ಉದ್ಯೋಗವನ್ನು ಅರಿಸುತ್ತ ನೆರೆ ರಾಜ್ಯ ಗೋವಾಕ್ಕೆ ಹೋಗುತ್ತಾರೆ. ಆರು ತಿಂಗಳ ಗೋವಾದಲ್ಲಿ ಉದ್ಯೋಗ ಮಾಡಿ, ಇನ್ನುಳಿದ ಆರು ತಿಂಗಳು ತಮ್ಮ ಗ್ರಾಮಗಳಲ್ಲಿ ಇರುತ್ತಾರೆ. 

ಗೋವಾಕ್ಕೆ ಉದ್ಯೋಗ ಅರಿಸಿ ಹೋಗಿರುವ ಭಜಂತ್ರಿ ಕುಟುಂಬವು ಲಾಕ್‌ಡೌನ್‌ನಿಂದಾಗಿ ತಮ್ಮ ಸ್ವಗ್ರಾಮ ನಿಡಗುಂದಿಗೆ ಬರಲು ಸಾಧ್ಯವಾಗದೇ ಅಲ್ಲಿಯೇ ಸಿಲುಕಿಕೊಂಡಿದೆ. ಈಗ ಅಲ್ಲಿ ಉದ್ಯೋಗವಿಲ್ಲದೇ, ಕೈಯಲ್ಲಿದ್ದ ಹಣವೆಲ್ಲವೂ ಖರ್ಚಾಗಿದ್ದರಿಂದ ಅನ್ನ, ಆಶ್ರಯಕ್ಕಾಗಿ ಪರದಾಡುವಂಥ  ಪರಿಸ್ಥಿತಿ ಉಂಟಾಗಿದ್ದು, ತಮಗೆ ಸಹಾಯ ಮಾಡುವಂತೆ ಕ್ಷೇತ್ರದ ಕುಡಚಿ ಶಾಸಕರಿಗೆ ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ. 

ಉದ್ಯೋಗ ಅರಿಸಿ ನೆರೆ ಗೋವಾ ರಾಜ್ಯಕ್ಕೆ ಹೋಗಿ ಅನ್ನ, ಆಶ್ರಯಕ್ಕಾಗಿ ಕಷ್ಟ ಪಡುತ್ತಿರುವ ಕುಡಚಿ ಕ್ಷೇತ್ರದ ನಿಡಗುಂದಿ ಗ್ರಾಮದ ಭಜಂತ್ರಿ ಕುಟುಂಬಗಳ ನೆರವಿಗೆ ಶಾಸಕರು ಬರಲಿ ಎಂಬುವುದೇ ಎಲ್ಲ ಪ್ರಜ್ಞಾವಂತ ನಾಗರೀಕರ ಒತ್ತಾಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿಂದಿನ ತಪ್ಪುಗಳನ್ನು ಸರಿಪಡಿಸಲು ನಮ್ಮ ಎನರ್ಜಿ ವ್ಯಯ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ; ಪ್ರತಿಪಕ್ಷಗಳಿಂದ ಸಭಾತ್ಯಾಗ

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿ ಮೋದಿ ವಿರುದ್ಧ 'ಅನಿರೀಕ್ಷಿತ ಕೃತ್ಯ'ದ ಬಗ್ಗೆ ಮಾಹಿತಿ ಇತ್ತು: ಸ್ಪೀಕರ್ ಸ್ಫೋಟಕ ಆರೋಪ

T20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯ ಆಡಲು ಪಾಕ್ ನಕಾರ, ಸೂರ್ಯ ಕುಮಾರ್ ಯಾದವ್ ಸ್ಪಷ್ಟ ನಿಲುವು!

ಮೇಘಾಲಯ: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ಭಾರೀ ಸ್ಫೋಟ; ಕನಿಷ್ಠ 16 ಕಾರ್ಮಿಕರು ಸಾವು

ಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ದರ ನಿಗದಿ ಸಮಿತಿ ಪುನಾರಚನೆಗೆ ಮನವಿ

SCROLL FOR NEXT