ರವಿ ಚೆನ್ನಣ್ಣನವರ್, ಲಕ್ಷ್ಮಣ್ ಸವದಿ 
ರಾಜ್ಯ

ರವಿ ಚೆನ್ನಣ್ಣನವರ್ ಸಾರಿಗೆ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿಲ್ಲ: ಡಿಸಿಎಂ ಸವದಿ

ಹಿರಿಯ ಪೊಲೀಸ್ ಅಧಿಕಾರಿ ರವಿ ಚೆನ್ನಣ್ಣನವರ್ ಸಾರಿಗೆ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಬೆಂಗಳೂರು: ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ಸಂಭವಿಸಿದ ಒಂದು ಘಟನೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಯಾದ ರವಿ ಚನ್ನಣ್ಣನವರ್ ಅವರ ವಿರುದ್ಧ ತಾವು  ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದೇನೆ ಎಂಬುದಾಗಿ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ  ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಸಾರಿಗೆ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ

ಸುದ್ದಿಗಾರರ ಜತೆ ಮಾತನಾಡಿದ ಅವರು, ರವಿಚನ್ನಣ್ಣವರ್ ಒಳ್ಳೆಯ  ಅಧಿಕಾರಿ ಎಂಬುದನ್ನು ನಾನು ಬಲ್ಲೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ  ವಿನ: ಸಾರಿಗೆ  ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸಿದ್ದು ನನ್ನ ಗಮನಕ್ಕೆ  ಬಂದಿಲ್ಲ ಮತ್ತು ಈ ಬಗ್ಗೆ ಯಾವುದೇ ಸಂಘಟನೆಗಳು ನನ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿಲ್ಲ ಎಂದರು.

ಹೀಗಿರುವಾಗ ವಿನಾಕಾರಣ ಸದರಿ ಅಧಿಕಾರಿ ವಿರುದ್ಧ ನಾನು ಮುಖ್ಯಮಂತ್ರಿಗಳಿಗೆ ದೂರು ನೀಡುವಂತಹ  ಪ್ರಶ್ನೆ ಉದ್ಭವಿಸುವುದಿಲ್ಲ. ಆದ್ದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗಬಾರದು ಎಂಬ ಹಿನ್ನೆಲೆಯಲ್ಲಿ ನಾನು ಈ ಸ್ಪಷ್ಟೀಕರಣವನ್ನು ನೀಡುತ್ತಿದ್ದೇನೆ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT