ರಾಜ್ಯ

ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಪೂರೈಕೆ ಆರಂಭ

Srinivasamurthy VN

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಜನರು ಮನೆಗಳಿಂದ ಹೊರಗೆ ಬಾರದಂತೆ ತಡೆಯುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಯೋಜನೆ  ಆರಂಭಿಸಲಾಗಿದೆ.

ಬಸವನಗುಡಿ, ಜಯನಗರ, ಪದ್ಮನಾಭನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಸಹಾಯವಾಣಿಗೆ ಕಂದಾಯ ಸಚಿವ ಆರ್. ಅಶೋಕ್ ಈ ಕುರಿತ ಸಹಾಯವಾಣಿಗೆ ಚಾಲನೆ ನೀಡಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಆರ್. ಅಶೋಕ್, 'ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿರುವಂತೆ ಸೂಚಿಸಿದ್ದರೂ ಸಹ ಕಾಲ್ನಡಿಗೆಯಲ್ಲಿ ಮತ್ತು ವಾಹನಗಳಲ್ಲಿ ಜನ ಸಂಚರಿಸುವುದನ್ನು ತಪ್ಪಿಸುವುದು ಕಷ್ಟ ಸಾಧ್ಯವಾಗಿದೆ. ಈ ಕುರಿತು ಪೊಲೀಸರು ಪ್ರಶ್ನಿಸಿದಾಗ ಅಗತ್ಯ ವಸ್ತು  ಖರೀದಿಸಲು ಹೊರಬಂದಿರುವುದಾಗಿ ಉತ್ತರಿಸುತ್ತಿದ್ದಾರೆ. 

ಕೊರೊನಾ ಸೋಂಕು ಹರಡದಂತೆ ಎಚ್ಚರವಹಿಸಲು ಜನಜಂಗುಳಿಯನ್ನು ಕಡಿಮೆ ಮಾಡುವುದೊಂದೇ ಸದ್ಯದ ಉಪಾಯವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ಜನರಿಗೆ ಮನೆ ಬಾಗಿಲಲ್ಲೇ ತಲುಪಿಸುವ ಮೂಲಕ ಅವರು, ಹೊರಗೆ ಬರದಂತೆ ನೋಡಿಕೊಳ್ಳಬೇಕಾಗಿದೆ ಎಂದರು.

SCROLL FOR NEXT