ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಪೂರೈಕೆ ಆರಂಭ

ಲಾಕ್ ಡೌನ್ ಅವಧಿಯಲ್ಲಿ ಜನರು ಮನೆಗಳಿಂದ ಹೊರಗೆ ಬಾರದಂತೆ ತಡೆಯುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಯೋಜನೆ  ಆರಂಭಿಸಲಾಗಿದೆ.

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಜನರು ಮನೆಗಳಿಂದ ಹೊರಗೆ ಬಾರದಂತೆ ತಡೆಯುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಯೋಜನೆ  ಆರಂಭಿಸಲಾಗಿದೆ.

ಬಸವನಗುಡಿ, ಜಯನಗರ, ಪದ್ಮನಾಭನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಸಹಾಯವಾಣಿಗೆ ಕಂದಾಯ ಸಚಿವ ಆರ್. ಅಶೋಕ್ ಈ ಕುರಿತ ಸಹಾಯವಾಣಿಗೆ ಚಾಲನೆ ನೀಡಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಆರ್. ಅಶೋಕ್, 'ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿರುವಂತೆ ಸೂಚಿಸಿದ್ದರೂ ಸಹ ಕಾಲ್ನಡಿಗೆಯಲ್ಲಿ ಮತ್ತು ವಾಹನಗಳಲ್ಲಿ ಜನ ಸಂಚರಿಸುವುದನ್ನು ತಪ್ಪಿಸುವುದು ಕಷ್ಟ ಸಾಧ್ಯವಾಗಿದೆ. ಈ ಕುರಿತು ಪೊಲೀಸರು ಪ್ರಶ್ನಿಸಿದಾಗ ಅಗತ್ಯ ವಸ್ತು  ಖರೀದಿಸಲು ಹೊರಬಂದಿರುವುದಾಗಿ ಉತ್ತರಿಸುತ್ತಿದ್ದಾರೆ. 

ಕೊರೊನಾ ಸೋಂಕು ಹರಡದಂತೆ ಎಚ್ಚರವಹಿಸಲು ಜನಜಂಗುಳಿಯನ್ನು ಕಡಿಮೆ ಮಾಡುವುದೊಂದೇ ಸದ್ಯದ ಉಪಾಯವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ಜನರಿಗೆ ಮನೆ ಬಾಗಿಲಲ್ಲೇ ತಲುಪಿಸುವ ಮೂಲಕ ಅವರು, ಹೊರಗೆ ಬರದಂತೆ ನೋಡಿಕೊಳ್ಳಬೇಕಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT