ಪೊಲೀಸರಿಗೆ ಹ್ಯಾಂಡ್ ಸ್ಯಾನಿಟೈಸರ್ ಹಾಕುತ್ತಿರುವ ಆರೋಗ್ಯ ಸಿಬ್ಬಂದಿ 
ರಾಜ್ಯ

ಹುಬ್ಬಳ್ಳಿ ಬಳಿಕ ವಿಜಯಪುರದಲ್ಲೂ ಇಬ್ಬರು ಪೊಲೀಸರಿಗೆ ಹೋಂ ಕ್ವಾರಂಟೈನ್!

ಹುಬ್ಬಳ್ಳಿ ಬೆನ್ನಲ್ಲೇ ವಿಜಯಪುರದಲ್ಲೂ ಸೋಂಕಿತರ ಮನೆಗೆ ತೆರಳಿ ಮಾಹಿತಿ ಕಲೆಹಾಕಿದ್ದ ಇಬ್ಬರು ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ವಿಜಯಪುರ: ಹುಬ್ಬಳ್ಳಿ ಬೆನ್ನಲ್ಲೇ ವಿಜಯಪುರದಲ್ಲೂ ಸೋಂಕಿತರ ಮನೆಗೆ ತೆರಳಿ ಮಾಹಿತಿ ಕಲೆಹಾಕಿದ್ದ ಇಬ್ಬರು ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ವಿಜಯಪುರದ ಚಪ್ಪರ್‌ಬಂದ್‌ ಪ್ರದೇಶದಲ್ಲಿ ಕೋವಿಡ್‌–19 ದೃಢಪಟ್ಟಿರುವ ಮಹಿಳೆ (ಪೇಷೆಂಟ್ ನಂಬರ್ 221) ಮನೆಗೆ ಮಾಹಿತಿ ಸಂಗ್ರಹಿಸಲು ತೆರಳಿದ್ದ ಇಬ್ಬರು ಪೊಲೀಸರನ್ನು ಹೋಂಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ  ಅನುಮಪ್‌ ಅಗರವಾಲ್‌, 'ಕೊರೊನಾ ಸೋಂಕಿತರ ಮನೆಗೆ ತೆರಳಿ ಕುಟುಂಬದವರ ಮಾಹಿತಿ ಸಂಗ್ರಹಿಸಿದ್ದ ಗೋಳಗುಮ್ಮಟ ಠಾಣೆ ಪಿಎಸ್‌ಐ ಮತ್ತು ಒಬ್ಬ ಕಾನ್‌ಸ್ಟೆಬಲ್‌ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ' ಎಂದು ತಿಳಿಸಿದರು.

ಕೊರೋನಾ ವೈರಸ್ ಪೀಡಿತ ಮಹಿಳೆ ಮತ್ತು ಆಕೆಯ ಕುಟುಂಬ ಸದಸ್ಯರ ಕುರಿತು ಮಾಹಿತಿ ಪಡೆಯಲು ಹೋಗಿದ್ದ ಗೋಳಗುಮ್ಮಟ ಠಾಣೆಯ ಪಿಎಸ್‌ಐ ಹಾಗೂ ಇಬ್ಬರು ಪೇದೆಗಳನ್ನು ಹೋಂ ಕ್ವಾರಂಟೈನ್‌ಗೆ ಗುರಿಪಡಿಸಲಾಗಿದೆ. ಕೊರೋನಾ ಪೀಡಿತ ಮಹಿಳೆಯ ಮನೆಗೆ ಭೆಟಿ ನೀಡಿದ್ದ  ಪಿಎಸ್‌ಐ ಹಾಗೂ ಇಬ್ಬರು ಪೇದೆಗಳಿಗೆ ಮನೆಯಲ್ಲೇ ಇರಲು ಜಿಲ್ಲಾ ಪೊಲೀಸ್ ಇಲಾಖೆ ಸೂಚನೆ ನೀಡಿದ್ದು, ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದೆ. ಈ ಮಧ್ಯೆ ವಿಜಯಪುರ ನಗರದಲ್ಲಿ 6 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಗುಮ್ಮಟನಗರಿಯ  ಜನರನ್ನು ಬೆಚ್ಚಿ ಬೀಳಿಸಿದೆ. ಒಂದೇ ದಿನದಲ್ಲಿ ಆರು ಪ್ರಕರಣಗಳು ದಾಖಲಾಗಿರುವುದರಿಂದ ಜಿಲ್ಲಾ ಆರೋಗ್ಯ ಇಲಾಖೆಯನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಗ್ಗಿಲ್ಲದ AI ಕಂಟೆಂಟ್, ಡೀಪ್‌ಫೇಕ್‌ಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಿಗೆ ಕೇಂದ್ರದ ಹೊಸ ನಿಯಮ!

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಕ್ಯಾಲಿಫೋರ್ನಿಯಾದಲ್ಲಿ ಏಕಾಂಗಿ ಪಾದಯಾತ್ರೆ: ಪೆಟ್ರೋಲಿಯಂಗೆ ಪರ್ಯಾಯ ಶೋಧದಲ್ಲಿ ತೊಡಗಿದ್ದ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿ ನಿಗೂಢ ಸಾವು!

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್