ಆಯುಕ್ತ ಭಾಸ್ಕರ್ ರಾವ್ 
ರಾಜ್ಯ

ಲಾಕ್ ಡೌನ್ ವಿಸ್ತರಣೆ , ಪೊಲೀಸ್ ಸಿಬ್ಬಂದಿಗೆ ಕಮೀಷನರ್ ಭಾಸ್ಕರ್ ರಾವ್ ಸೂಚನೆ

ಕೊರೊನ ಹಿನ್ನಲೆಯಲ್ಲಿ ದೇಶಾದ್ಯಂತ ಜಾರಿ ಗೊಳಿಸಲಾಗಿದ್ದ ಲಾಕ್ ಡೌನ್ ನಾಳೆಗೆ ಮುಕ್ತಾಯವಾಗಲಿದೆಯದರೂ ಮತ್ತೆ ಎರಡು ವಾರಗಳ ಮಟ್ಟಿಗೆ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ .

ಬೆಂಗಳೂರು:  ಕೊರೊನ ಹಿನ್ನಲೆಯಲ್ಲಿ ದೇಶಾದ್ಯಂತ ಜಾರಿ ಗೊಳಿಸಲಾಗಿದ್ದ ಲಾಕ್ ಡೌನ್ ನಾಳೆಗೆ ಮುಕ್ತಾಯವಾಗಲಿದೆಯದರೂ ಮತ್ತೆ ಎರಡು ವಾರಗಳ ಮಟ್ಟಿಗೆ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ .

ಈ ನಿಟ್ಟಿನಲ್ಲಿ 2 ನೇ ಹಂತದ ಲಾಕ್ ಡೌನ್ ಬಗ್ಗೆ ಕಟ್ಟು ನಿಟ್ಟಾದ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಜ್ಜಾಗಿದ್ದು ಈ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪೊಲೀಸ್ ಸಿಬ್ಬಂದಿಗೆ ಹಲವು ಸೂಚನೆ ನೀಡಿದ್ದಾರೆ.

ಪೋಲೀಸರಿಗೆ ಭಾಸ್ಕರ್ ರಾವ್ ನೀಡಿರುವ ಪ್ರಮುಖ ಸೂಚನೆಗಳು ಹೀಗಿದೆ-

  • ಎಲ್ಲಾ ಸಿಬ್ಬಂದಿಗಳು ಒಳ್ಳೆಯ ಕೆಲಸ ಮಾಡಿ, ಎಲ್ಲರ ಕಡೆಯಿಂದ ಪ್ರಶಂಸೆ ಪಡೆದಿದ್ದೇವೆ.
  • ಇನ್ನು ಉಳಿದ ದಿನಗಳಲ್ಲಿ ಕೂಡ ನಾವು ಹೀಗೆ ಕೆಲಸ‌ ಮಾಡಬೇಕು, ಸಾರ್ವಜನಿಕರಿಗೆ ಸಮಸ್ಯೆ ಆಗಬಾರದು.
  • ಮಾಧ್ಯಮದವರಿಗೆ, ಹಣ್ಣು ತರಕಾರಿ, ದಿನಸಿ ತರುವವರಿಗೆ ಸಮಸ್ಯೆ ಮಾಡಬಾರದು.
  • ಗೂಡ್ಸ್ ವಾಹನಗಳಿಗೆ ಯಾವುದೇ ತೊಂದರೆ ಆಗಬಾರದು, ಖಾಲಿ ವಾಹನ ಇರಲಿ, ತುಂಬಿದ ವಾಹನ ಇರಲಿ. ಅವರಿಗೆ ಸಮಸ್ಯೆ ಮಾಡಬಾರದು.
  • ಮಾರ್ಕೆಟ್​ಗಳಿಗೆ ಬರುವ ಹಮಾಲಿಗಳಿಗೆ ತೊಂದರೆ ಕೊಡಬಾರದು.
  • ಕೆಲವರು ಪಾಸ್ ಇಲ್ಲದೆ ತುರ್ತಾಗಿ ಓಡಾಡಬೇಕಾಗಿರುತ್ತೆ, ಅಂತಾ ಸಮಯದಲ್ಲಿ ಸಾಮಾಜ್ಯಜ್ಞಾನ ಬಳಸಿ ನಿರ್ಧಾರ ಕೈಗೊಳ್ಳಬೇಕು. ಗರ್ಭಿಣಿಯರು, ಅನಾರೋಗ್ಯಕ್ಕೆ ಒಳಗಾದವರು ಬಂದಾಗ ಸಹನೆಯಿಂದ ಮಾತನಾಡಿಸಿ ಸಹಾಯ ಮಾಡಿ.
  • ಎಟಿಎಂ ಕೆಲಸದವರಿಗೆ, ಸರ್ಕಾರಿ ಅಧಿಕಾರಿಗಳು, ಪ್ರವೈಟ್ ಸೆಕ್ಯೂರಿಟಿ ಎಸೆನ್ಸಿಯಲ್ ಸರ್ವಿಸ್ ಅವರಿಗೆ ತೊಂದರೆ ಕೊಡಬಾರದು.
  • ನಕಲಿ‌ ಪಾಸ್ ಮಾಡಿಕೊಂಡು ಓಡಾಡುವರ ವಿರುದ್ದ ಸೂಕ್ತ ಕ್ರಮ‌ ಜರುಗಿಸಿ. ಹಾಗೂ ಲಾಕ್ ಡೌನ್ ಮುಗಿದ ಬಳಿಕ ವಾಹನ ವಾಪಸ್ ನೀಡಲು ದಾಖಲಾತಿಗಳನ್ನು ಮಾಡಿಕೊಳ್ಳಿ.
  • ಸಾರ್ವಜನಿಕರಿಗೆ ನಮ್ಮ‌ ಮೇಲೆ ನೀರಿಕ್ಷೆ ಇದೆ. ನೀವು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದೀರ. ನಿಮ್ಮ ಆರೋಗ್ಯ ಕಾಪಾಡಿಕೊಂಡು ಕೆಲಸ ಮಾಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT