ಸಾಂದರ್ಭಿಕ ಚಿತ್ರ 
ರಾಜ್ಯ

ಸೀಜ್ ಆದ ಆಟೋ ಪಾರ್ಕಿಂಗ್ ವೇಳೆ ಅವಘಡ: ಪೇದೆಗೆ ಗಂಭೀರ ಗಾಯ; ಗೃಹ ಸಚಿವರಿಂದ ಆರೋಗ್ಯ ವಿಚಾರಣೆ

ಸೀಜ್ ಆದ ಆಟೋವನ್ನು ಪೊಲೀಸ್ ಠಾಣೆ ಬಳಿ ನಿಲ್ಲಿಸಲು ತೆಗೆದುಕೊಂಡು ಹೋಗುವಾಗ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಹೆಡ್​ ಕಾನ್ಸ್​ಟೆಬಲ್ ನಾಗೇಶ್ ಅವರ ತಲೆಗೆ ಗಂಭೀರ ಗಾಯವಾಗಿದೆ.

ಬೆಂಗಳೂರು: ಕರ್ತವ್ಯ ನಿರತನಾಗಿದ್ದ ವೇಳೆ ಪೊಲೀಸರೊಬ್ಬರು ಅಪಘಾತಕ್ಕೀಡಾಗಿ ಜೀವನ್ಮರಣ ಹೋರಾಟದಲ್ಲಿದ್ದಾರೆ. 

ಸೀಜ್ ಆದ ಆಟೋವನ್ನು ಪೊಲೀಸ್ ಠಾಣೆ ಬಳಿ ನಿಲ್ಲಿಸಲು ತೆಗೆದುಕೊಂಡು ಹೋಗುವಾಗ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಹೆಡ್​ ಕಾನ್ಸ್​ಟೆಬಲ್ ನಾಗೇಶ್ ಅವರ ತಲೆಗೆ ಗಂಭೀರ ಗಾಯವಾಗಿದೆ.

ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯದ ಬಳಿ ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನ ತಡೆಯುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದರು. ಈ ವೇಳೆ, ಆಟೋವನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಸೀಜ್ ಆದ ಆಟೋವನ್ನು ಪೀಣ್ಯ ಠಾಣೆ ಸಮೀಪದ ಮಂಜುನಾಥ ನಗರದಲ್ಲಿ ನಿಲ್ಲಿಸಲು ನಾಗೇಶ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಈ ವೇಳೆ, ಆಟೋ ಮಗುಚಿ ಬಿದ್ದಿತೆನ್ನಲಾಗಿದೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ನಾಗೇಶ್ ಅವರಿಗೆ ಧೈರ್ಯ ಹೇಳಿದ್ದಾರೆ. ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವ ಪೊಲೀಸರನ್ನು ಸಚಿವರು ಶ್ಲಾಘಿಸಿದ್ದಾರೆ. ಕರ್ತವ್ಯದ ವೇಳೆ ಅಪಘಾತವಾದಾಗ ಪೊಲೀಸರಿಗೆ ಎಲ್ಲಾ ರೀತಿಯ ನೆರವು ನೀಡಲಾಗುತ್ತದೆ. ನಾಗೇಶ್ ಅವರಿಗೆ ಬರಬೇಕಾದ ವಿಮೆ ಮತ್ತು ಭತ್ಯೆ ದೊರೆಯುತ್ತದೆ ಎಂದು ಬೊಮ್ಮಾಯಿ ಭರವಸೆ ನೀಡಿದ್ಧಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!