ಶೋಭಾ ನಾಯ್ಡು 
ರಾಜ್ಯ

ಹರಿಕಥಾ ವಿದ್ವಾನ್ ಶೋಭಾ ನಾಯ್ಡು ವಿಧಿವಶ

ಮೂರು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ್ದ ಹರಿಕಥಾ ವಿದ್ವಾಂಸ ಗುರುರಾಜುಲು ನಾಯ್ಡು ಅವರ ಪುತ್ರಿ ಶೋಭಾ ನಾಯ್ಡು ಅವರು ವಿಧಿವಶರಾಗಿದ್ದಾರೆ.

ಬೆಂಗಳೂರು: ಮೂರು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ್ದ ಹರಿಕಥಾ ವಿದ್ವಾಂಸ ಗುರುರಾಜುಲು ನಾಯ್ಡು ಅವರ ಪುತ್ರಿ ಶೋಭಾ ನಾಯ್ಡು ಅವರು ವಿಧಿವಶರಾಗಿದ್ದಾರೆ.

ತಂದೆ ಗುರುರಾಜುಲು ನಾಯ್ಡು ಅವರ ವಿರೋಧದ ನಡುವೆಯೂ ಶೋಭಾ ನಾಯ್ಡು ಅವರು ಹರಿಕಥೆ ಮಾಡುವುದನ್ನು ಬಿಟ್ಟಿರಲಿಲ್ಲ. ಇನ್ನು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆಲವೇ ಕೆಲ ಸಂಬಂಧಿಕರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಇನ್ನು ಶೋಭಾ ನಾಯ್ಡು ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗುರುರಾಜುಲು ನಾಯ್ಡು ಅವರ ನಿಧನದ ಬಳಿಕ ಶೋಭಾ ನಾಯ್ಡು ಅವರು ಬೆಂಗಳೂರಿಗೆ ಬಂದರು. ಭಾರತೀಯ ವಿಮಾನ ಕಾರ್ಖಾನೆಯಲ್ಲಿ ನೌಕರಿಗೆ ಸೇರಿದರು. ಸಮಯ ಸಿಕ್ಕಾಗ ಹರಿಕಥೆ ಮಾಡುತ್ತಾ ಜೊತೆಗೆ ನಾಟಕಗಳಲ್ಲಿಯೂ ಅಭಿನಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆಂಗಳೂರಿಗರಿಗೆ ಗುಡ್​​ನ್ಯೂಸ್: ನ.1ರಿಂದ A ಖಾತಾ ಅಭಿಯಾನ; ಆನ್‌ಲೈನ್ ವ್ಯವಸ್ಥೆಗೆ DCM ಚಾಲನೆ

ಆಂಧ್ರ vs ಕರ್ನಾಟಕ: 'ಅವರು ಅಸಮರ್ಥರಾದರೆ ನಾವೇನು ಮಾಡಲು ಸಾಧ್ಯ..': ಬೆಂಗಳೂರು ರಸ್ತೆಗುಂಡಿ, ಉದ್ಯಮಗಳ ಸ್ಥಳಾಂತರದ ಬಗ್ಗೆ ಸಚಿವ ನಾರಾ ಲೋಕೇಶ್ ಹೊಸ ಬಾಂಬ್!

EV, ಬ್ಯಾಟರಿಗಳಿಗೆ ಸಬ್ಸಿಡಿ: ಭಾರತದ ವಿರುದ್ಧ WTO ದಲ್ಲಿ ದೂರು ದಾಖಲಿಸಿದ ಚೀನಾ!

ಬೆಂಗಳೂರು ಶಾಕಿಂಗ್: ಇಂಜೆಕ್ಷನ್ ಚುಚ್ಚಿ ಪತ್ನಿಯನ್ನೇ ಕೊಂದ ವೈದ್ಯ; ಪ್ರಕರಣ ಬಯಲಾಗಿದ್ದೇ ರೋಚಕ!

1 ವರ್ಷದ ತನ್ನ ಮಗುವನ್ನು ಫ್ಯಾನ್ ಗೆ ನೇಣು ಬಿಗಿದ ಮಹಿಳೆ; ಬಂಧನ!

SCROLL FOR NEXT