ರಾಜ್ಯ

ಬಳ್ಳಾರಿ: ಇಬ್ಬರು ನಕಲಿ ವೈದ್ಯರ ಬಂಧನ

ಸಂಡೂರು ತಹಸೀಲ್ದಾರ್ ರಶ್ಮಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಸಂಡೂರು ತಾಲೂಕಿನ ವಿವಿಧೆಡೆ ಮಂಗಳವಾರ ಕಾರ್ಯಾಚರಣೆ ನಡೆಸಿ ಮೂವರು ಜನ ನಕಲಿ ವೈದ್ಯರನ್ನು ಪತ್ತೆ ಹಚ್ಚಿ, ಅವರು ನಡೆಸುತ್ತಿದ್ದ ಕ್ಲಿನಿಕ್ ಗಳನ್ನು ಜಪ್ತಿ ಮಾಡಿದ್ದಾರೆ.

ಬಳ್ಳಾರಿ: ಸಂಡೂರು ತಹಸೀಲ್ದಾರ್ ರಶ್ಮಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಸಂಡೂರು ತಾಲೂಕಿನ ವಿವಿಧೆಡೆ ಮಂಗಳವಾರ ಕಾರ್ಯಾಚರಣೆ ನಡೆಸಿ ಮೂವರು ಜನ ನಕಲಿ ವೈದ್ಯರನ್ನು ಪತ್ತೆ ಹಚ್ಚಿ, ಅವರು ನಡೆಸುತ್ತಿದ್ದ ಕ್ಲಿನಿಕ್ ಗಳನ್ನು ಜಪ್ತಿ ಮಾಡಿದ್ದಾರೆ.

ಕಾಳಿಂಗೇರಿಯಲ್ಲಿ ಅವಿಷೇಕ್ ಎನ್ನುವ ಆರ್.ಎಂ.ಪಿ ಡಾಕ್ಟರ್ ಪಶ್ಚಿಮ ಬಂಗಾಳದ ನಕಲಿ ಪ್ರಮಾಣಪತ್ರ ಮತ್ತು ನಕಲಿ ಐಡಿ ಕಾರ್ಡ್ ಇಟ್ಟುಕೊಂಡು ‌ಜನರಿಗೆ‌ ಚಿಕಿತ್ಸೆ ನೀಡುತ್ತಿದ್ದ. ಸ್ಟೀರಾಯ್ಡ್ ಬಳಸುತ್ತಿದ್ದ ಜತೆಗೆ ಓವರ್ ಡೋಸ್ ನೀಡುತ್ತಿರುವುದು ತನಿಖೆ ವೇಳೆ ಕಂಡುಬಂದಿದೆ ಎಂದು ತಹಸೀಲ್ದಾರ್ ರಶ್ಮಿ ತಿಳಿಸಿದರು.

ಚೋರನೂರು ಹೋಬಳಿ ವ್ಯಾಪ್ತಿಯ ಅಂಕಮ್ಮನಾಳದಲ್ಲಿ ಕ್ಲಿನಿಕ್ ತೆರೆದು ನಕಲಿ ಪ್ರಮಾಣಪತ್ರ ಮತ್ತು ನಕಲಿ ಐಡಿ ಇಟ್ಟುಕೊಂಡು ಜನರಿಗೆ ಚಿಕಿತ್ಸೆ ನೀಡುತ್ತಿದ್ದ. ಬಸವರಾಜ್ ಮತ್ತು ಜಾಫರ್ ಅಲಿ ಎನ್ನುವವರಲ್ಲಿ ಕರ್ನಾಟಕ ಮೆಡಿಕಲ್ ಅಸೋಸಿಯೇಶನ್ ಸಂಬಂಧಿಸಿದ ಯಾವುದೇ ಪ್ರಮಾಣಪತ್ರ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಲಭ್ಯವಿರಲಿಲ್ಲ. ಇವರು ಕೂಡ ಸ್ಟೀರಾಯ್ಡ್ ಬಳಸುತ್ತಿರುವುದು ಮತ್ತು ಓವರ್ ಡೋಸ್ ನೀಡುತ್ತಿರುವುದು ಕಂಡುಬಂದಿದೆ. ಬಂಧಿತರನ್ನು ಕೂಡ್ಲಿಗಿ ಪೊಲೀಸ್ ಠಾಣೆಯ ಪೊಲೀಸರ ವಶಕ್ಕೆ ನೀಡುವಾಗ ಜಾಫರ್ ಅಲಿ ಎನ್ನುವವರು ತಪ್ಪಿಸಿಕೊಂಡಿದ್ದು,ಪೊಲೀಸರು ಬಂಧನಕ್ಕೆ ‌ಜಾಲ‌ ಬೀಸಿದ್ದಾರೆ. ಉಳಿದ ಇಬ್ಬರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ ಎಂದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT