ಭಾಸ್ಕರ್ ರಾವ್ 
ರಾಜ್ಯ

ಮಾನವೀಯತೆಯಿಂದ ಕೆಲಸ ಮಾಡಿ: ಪೊಲೀಸರಿಗೆ ಭಾಸ್ಕರ್‌ ರಾವ್ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಭಾಷಣ ಬೆನ್ನಲ್ಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾಷಣ ಬೆನ್ನಲ್ಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

ಕಳೆದ ಮೂರು ವಾರಗಳಲ್ಲಿ ಪೊಲೀಸ್ ಸಿಬ್ಬಂದಿಯ ಸೇವೆಗೆ ಸರ್ಕಾರ ಹಾಗೂ ಸಾರ್ವಜನಿರಿಂದ ಪ್ರಶಂಸೆ ಕೇಳಿಬಂದಿದೆ.

ಕಳೆದ ಮೂರು ವಾರಗಳಿಂದ ಸಾರ್ವಜನಿಕರು ಸಹಕಾರ ಕೊಟ್ಟಿದ್ದಾರೆ, ಹೀಗಾಗಿ ಮಾಧ್ಯಮದವರು, ತರಕಾರಿ ಮಾರಾಟ ಮಾಡುವವರು, ಪೌಲ್ಟ್ರಿ ಉತ್ಪನ್ನ ಮಾರಾಟ ಮಾಡುವವರಿಗೆ ಪೊಲೀಸ್ ಸಿಬ್ಬಂದಿ ಯಾವುದೇ ತೊಂದರೆ ಕೊಡಬಾರದು. ಎಪಿಎಂಸಿಗೆ ದೊಡ್ಡ ದೊಡ್ಡ ಟ್ರಕ್‌ಗಳಲ್ಲಿ ಅಗತ್ಯ ವಸ್ತುಗಳು ಬರುತ್ತಿವೆ, ಅವುಗಳಿಗೆ ತೊಂದರೆ ಕೊಡಬಾರದು, ಖಾಲಿ ಟ್ರಕ್‌ಗಳು ಹೋಗುವುದು, ಬರುವುದು ಮಾಡುತ್ತಿವೆ, ಅವುಗಳಿಗೂ ತೊಂದರೆ ಕೊಡಬಾರದು ಎಂದು ಸೂಚಿಸಿದ್ದಾರೆ.

ಗೂಡ್ಸ್‌ ವಾಹನಗಳಿಗೆ ಯಾವುದೆ ತೊಂದರೆ ಕೊಡಬಾರದು. ಎಪಿಎಂಸಿಗೆ ಬರುವ ಹಮಾಲಿಗಳಿಗೆ, ಕೂಲಿ ಕಾರ್ಮಿಕರಿಗೆ ಯಾವುದೇ ತೊಂದರೆ ಕೊಡಬಾರದು ಎಂದು ಪೊಲೀಸ್ ಸಿಬ್ಬಂದಿಗೆ ನಿರ್ದೇಶಿಸಿದ್ದಾರೆ.

ಡಯಾಲಿಸಿಸ್, ಗರ್ಭಿಣಿ ಮಹಿಳೆಯರಿಗೆ, ಕಿಮೊಥೆರಪಿಗೆ ಹೋಗುವವರಿಗೆ ಪಾಸ್‌ ಇಲ್ಲದೆ ಇದ್ದರೂ ಅವಮಾನ ಮಾಡಬಾರದು. ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳನ್ನು ಬಳಕೆ ಮಾಡಬಾರದು. ಟ್ಯಾಂಕರ್ ನೀರು, ವಿದ್ಯುತ್, ಸರ್ಕಾರಿ ಸಿಬ್ಬಂದಿಗೆ ಅವಕಾಶ ಕೊಡಬೇಕು. ಪಾಸ್‌ ಚೆಕ್‌ ಮಾಡುತ್ತಿರಬೇಕು, ನಕಲಿ ಪಾಸ್, ಝೆರಾಕ್ಸ್ ಪಾಸ್‌ಗಳನ್ನು ಪತ್ತೆ ಮಾಡಬೇಕು.

ಪ್ರತಿದಿನ ಪ್ರತಿ ಪೊಲೀಸ್ ಸಿಬ್ಬಂದಿಗೆ 3 ಲೀಟರ್ ನೀರು, 4 ಕಿತ್ತಳೆ ಹಣ್ಣುಗಳನ್ನು ಸೇವಿಸಲು ಒದಗಿಸಬೇಕು. ಯಾವುದೇ ಸಮಸ್ಯೆ ಇದ್ದರೂ ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತರು ಮೌಖಿಕವಾಗಿ ದೂರವಾಣಿ ಮೂಲಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT