ಸಾಂದರ್ಭಿಕ ಚಿತ್ರ 
ರಾಜ್ಯ

ಕೆ.ಆರ್ ಪುರಂ: ಬಡವರಿಗೆ ಪಡಿತರ ನೀಡುತ್ತಿದ್ದ ದಲಿತ ವ್ಯಕ್ತಿ ಮೇಲೆ ಹಲ್ಲೆ

ತನ್ನ ಸ್ನೇಹಿತರ ಜೊತೆಗೂಡಿ ಬಡವರಿಗೆ ಹಾಲು ಹಂಚುತ್ತಿದ್ದ ವ್ಯಕ್ತಿಗೆ ಉದ್ಯಮಿಯೊಬ್ಬ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಕೆ.ಆರ್ ಪುರಂ ನಲ್ಲಿ ನಡೆದಿದೆ.

ಬೆಂಗಳೂರು: ತನ್ನ ಸ್ನೇಹಿತರ ಜೊತೆಗೂಡಿ ಬಡವರಿಗೆ ಹಾಲು ಹಂಚುತ್ತಿದ್ದ ವ್ಯಕ್ತಿಗೆ ಉದ್ಯಮಿಯೊಬ್ಬ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಕೆ.ಆರ್ ಪುರಂ ನಲ್ಲಿ ನಡೆದಿದೆ.

ಅನಿಲ್ ಕುಮಾರ್ ತಮ್ಮ ಸ್ನೇಹಿತರೊಂದಿಗೆ ಸೇರಿ ಬಡವರಿಗೆ ಹಾಲು ಮತ್ತು ಅಗತ್ಯ ವಸ್ತುಗಳನ್ನು ನೀಡುತ್ತಿದ್ದರು. ಪ್ಯಾಕ್ ಮಾಡಿದ ಆಹಾರ ಪಟ್ಟಣ ಮತ್ತು ರೇಷನ್ ವಾಹನವನ್ನು ರಾಧಾಕೃಷ್ಣ ರೆಡ್ಡಿ ಎಂಬುವರ ಮನೆ ಮುಂದೆ ನಿಲ್ಲಿಸಿದ್ದರು.

ವಾಹನ ನೋಡಿದ ರಾಧಾಕೃಷ್ಣ ರೆಡ್ಡಿ, ಅನಿಲ್ ಅವರನ್ನು ನಿಂದಿಸಿದ್ದಾರೆ. ಅನಿಲ್ ಕೆಳ ಜಾತಿಯವನು ಹೀಗಾಗಿ ಆತನಿಂದ ಯಾವ ವಸ್ತುವನ್ನು ತೆಗೆದುಕೊಳ್ಳದಂತೆ ಸ್ಥಳೀಯರಿಗೆ ಹೇಳಿ, ತನ್ನ ಕುಟುಂಬದ ಮೂವರೊಂದಿಗೆ ಸೇರಿ ಅನಿಲ್ ಮತ್ತು ಆತನ ಸ್ನೇಹಿತರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನಿಲ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.ಅನಿಲ್ ಮತ್ತು ಆತನ ಕುಟುಂಬಸ್ಥರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT