ರಾಜ್ಯ

ಮಂಡ್ಯ: :ಇಂದು ನಗರಕ್ಕೆ ಸಂಸದೆ ಸುಮಲತಾ ಭೇಟಿ;ರೈತರಿಂದ ತರಕಾರಿ ಖರೀದಿಗೆ ಚಾಲನೆ

Raghavendra Adiga

ಮಂಡ್ಯ: :ಸಂಸದೆ ಸುಮಲತಾ ಅಂಬರೀಶ್ ಅವರು ಏ.೧೬ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಿರುವ ಸ್ವರ್ಣಸಂದ್ರದ ಬಡಾವಣೆಯ ಪರಿವೀಕ್ಷಣೆ ನಡೆಸಲಿದ್ದಾರೆ.

ಮಧ್ಯಾಹ್ನ ೧೨ ಗಂಟೆಗೆ ಮಂಡ್ಯ ಕೋವಿಡ್-೧೯ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಸುವರು.

ಸಭೆಯ ಬಳಿಕ ಸುಮಲತಾ ಅಂಬರೀಶ್ ಅವರು ಸಂಕಷ್ಟದಲ್ಲಿರುವ ರೈತರಿಂದ ಹಣ್ಣು ಮತ್ತು ತರಕಾರಿ ಖರೀದಿಸಿ ಕೊವಿಡ್-೧೯ ಸೋಂಕಿನಿAದ ನಿರ್ಬಂಧಿತವಾಗಿರುವ ಪ್ರದೇಶಗಳಿಗೆ ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಕಛೇರಿ  ಮುಂಭಾಗ ಚಾಲನೆ ನೀಡಲಿದ್ದಾರೆ ಎಂದು ಸಂಸದರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-ನಾಗಯ್ಯ 

SCROLL FOR NEXT