ರಾಜ್ಯ

ರವಿ ಪೂಜಾರಿ ಬಂಧನ ಹಿನ್ನೆಲೆ: ಮಾಜಿ ಡಾನ್ ಮುತ್ತಪ್ಪ ರೈ ವಿಚಾರಣೆ

Shilpa D

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಭಾಗಿಯಾದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರನ್ನು ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರ ತಂಡ ತೀವ್ರ ವಿಚಾರಣೆ ನಡೆಸಿದೆ.

ಮುತ್ತಪ್ಪ ರೈ ಅನಾರೋಗ್ಯದಲ್ಲಿ ಇರುವುದರಿಂದ ಅವರ ಮನೆಗೆ ತೆರಳಿ ವಿಚಾರಣೆ ನಡೆಸಲಾಗಿದೆ. ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದ ಆಧಿಕಾರಿಗಳ ತಂಡ ರೈ ಅವರನ್ನು ಸುಮಾರು ಎರಡು ತಾಸು ವಿಚಾರಣೆಗೆ ಒಳಪಡಿಸಿದೆ' ಎಂದು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದ್ದಾರೆ.

ಕ್ಯಾನ್ಸರ್ ಪೀಡಿತರಾಗಿರುವ ರೈ ಅವರ ಆರೋಗ್ಯ ಕೆಲವು ತಿಂಗಳುಗಳಿಂದ ತೀವ್ರ ಹದಗೆಟ್ಟಿದೆ. ರವಿ ಪೂಜಾರಿ ಭಾಗಿಯಾದ ಕೆಲವು ಪ್ರಕರಣಗಳಲ್ಲಿ ರೈ ಹೆಸರೂ ತಳುಕು ಹಾಕಿಕೊಂಡಿದೆ. ಆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿದೆ. ಕೆಲವು ಮಹತ್ವದ ಸಂಗತಿಗಳನ್ನು ರೈ ಹಂಚಿಕೊಂಡಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ರಾಜ್ಯ ಪೊಲೀಸರ ತಂಡ ಇತ್ತೀಚೆಗೆ ದಕ್ಷಿಣ ಆಫ್ರಿಕಾದ ಸೆನಗಲ್‌ನಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಬಂದಿತ್ತು.

SCROLL FOR NEXT