ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಒಂದೇ ದಿನ 36 ಮಂದಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದ್ದು, ಗುರುವಾರ ಒಂದೇ ದಿನವೇ ರಾಜ್ಯದಲ್ಲಿ ಹೊಸದಾಗಿ ೩೬ ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದ್ದು, ಗುರುವಾರ ಒಂದೇ ದಿನವೇ ರಾಜ್ಯದಲ್ಲಿ ಹೊಸದಾಗಿ ೩೬ ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ೩೧೫ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಈವರೆಗೆ ೧೩ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ೮೨ ಮಂದಿ ಚಿಕಿತ್ಸೆ ನಂತರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ೬೬ ವರ್ಷದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ ೧೩ಕ್ಕೆ ಹೆಚ್ಚಳವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಇಂದು ಸಂಜೆ ಕಲಬುರಗಿಯ 5 ವರ್ಷದ ಬಾಲಕ ಹಾಗೂ 32 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

ಹೊಸದಾಗಿ ಪತ್ತೆಯಾಗಿರುವ ಪ್ರಕರಣಗಳಲ್ಲಿ ಬೆಳಗಾವಿಯಲ್ಲಿ ೧೭, ವಿಜಯಪುರದಲ್ಲಿ ೭, ಮೈಸೂರಿನಲ್ಲಿ ೩, ಕಲಬುರಗಿಯಲ್ಲಿ ೨ ಸೇರಿದಂತೆ ಒಟ್ಟು ರಾಜ್ಯಾದ್ಯಂತ ೩೬ ಪ್ರಕರಣಗಳು ದೃಢಪಟ್ಟಿವೆ.

ಬೆಂಗಳೂರು ನಗರದಲ್ಲಿ ೭೬, ಮೈಸೂರು ೬೧, ಬೆಳಗಾವಿ ೩೬, ಕಲಬುರಗಿ ೨೦, ವಿಜಯಪುರ ೧೭, ಬಾಗಲಕೋಟೆ೧೪, ಬೀದರ್ ಮತ್ತು ಚಿಕ್ಕಬಳ್ಳಾಪುರ ತಲಾ ೧೩, ಬೆಂಗಳೂರು ಗ್ರಾಮಾಂತರ-೧೨, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ತಲಾ ೧೧, ಮಂಡ್ಯ ೮, ಬಳ್ಳಾರಿ ಮತ್ತು ಧಾರವಾಡ ತಲಾ ೬, ಉಡುಪಿ ೩, ದಾವಣಗೆರೆ ಗದಗ ಮತ್ತು ತುಮಕೂರು ತಲಾ ೨, ಚಿತ್ರದುರ್ಗ ಮತ್ತು ಕೊಡಗು ತಲಾ ೧ ಪ್ರಕರಣಗಳು ದಾಖಲಾಗಿವೆ. ಒಟ್ಟಾರೆ ಸೋಂಕು ೨೦ ಜಿಲ್ಲೆಗಳಿಗೆ ವ್ಯಾಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ಕರ್ನಾಟಕದ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

Dhurandhar 2 ಆರ್ಭಟಕ್ಕೆ ಬೆದರಿದ ಮತ್ತೊಂದು ಸಿನಿಮಾ; 'ಡಕಾಯಿತ್' ಬಿಡುಗಡೆ ಮುಂದೂಡಿಕೆ

CM ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ; FIR ದಾಖಲಿಸುವಂತೆ ಸುರ್ಜೇವಾಲ ಆಗ್ರಹ

SCROLL FOR NEXT