ಪರಮೇಶ್ವರ್ 
ರಾಜ್ಯ

'ಯೂಸ್‌ಲೆಸ್ ಫೆಲೊಸ್, ನಾನು ಕೇಳಿದ್ದಕ್ಕಷ್ಟೆ ಉತ್ತರ ಕೊಡಿ': ಅಧಿಕಾರಿಗಳಿಗೆ ಮಾಜಿ ಡಿಸಿಎಂ ತರಾಟೆ

ಕೊರಟಗೆರೆ ಕ್ಷೇತ್ರದ ಎಲ್ಲ ಹೋಬಳಿ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿದ್ದ ಮಾಜಿ ಡಿಸಿಎಂ ಜಿ ಪರಮೇಶ್ವರ್ ಕೊವಿಡ್-19 ಹಿನ್ನೆಲೆಯಲ್ಲೆ ಏನೆಲ್ಲ ಕ್ರಮ ವಹಿಸಲಾಗಿದೆ ಎಂದು ಪರಿಶೀಲಿಸಿದರು.

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ಎಲ್ಲ ಹೋಬಳಿ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿದ್ದ ಮಾಜಿ ಡಿಸಿಎಂ ಜಿ ಪರಮೇಶ್ವರ್ ಕೊವಿಡ್-19 ಹಿನ್ನೆಲೆಯಲ್ಲೆ ಏನೆಲ್ಲ ಕ್ರಮ ವಹಿಸಲಾಗಿದೆ ಎಂದು ಪರಿಶೀಲಿಸಿದರು.

ಹೊರಗಿನಿಂದ ತಾಲ್ಲೂಕಿಗೆ ಬಂದವರ ಮಾಹಿತಿ, ಅಂಕಿ– ಅಂಶ ನೀಡದ ಕಾರಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. `ಹೇ.. ನಾನು ಕೇಳಿದಕ್ಕಷ್ಟೇ ಉತ್ತರ ಕೊಡ್ರಿ. ಇಲ್ಲಿಯವರೆಗೂ ಏನೇನ್ ಮಾಡಿದ್ದೀರಿ ಅಂಕಿ ಅಂಶ ಕೊಡಿ. ಯೂಸ್‌ಲೆಸ್ ಫೆಲೊಸ್ ತಂದು’ ಎಂದು ಶಾಸಕ ಡಾ.ಜಿ.ಪರಮೇಶ್ವರ ಅಧಿಕಾರಿಗಳ ವಿರುದ್ಧ ಗರಂ ಆದರು.

20 ದಿನಗಳ ಹಿಂದೆ ಕ್ಷೇತ್ರಕ್ಕೆ ಬಂದಾಗ 9 ಸಾವಿರ ಜನ ತಾಲ್ಲೂಕಿಗೆ ಬೇರೆ ಬೇರೆ ಕಡೆಯಿಂದ ಬಂದಿದ್ದಾರೆ ಎಂದು ಮಾಹಿತಿ ನೀಡಲಾಗಿತ್ತು. ಬಂದವರ ವೈಯಕ್ತಿಕ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ್ದರೂ ತಾಲ್ಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಬಂದವರ ಹೆಸರು, ವಿಳಾಸ, ಅಂಕಿ ಅಂಶಗಳನ್ನು ನೀಡದ ಕಾರಣ ಕೋಪಗೊಂಡ ಶಾಸಕರು, ‘ಅಧಿಕಾರಿಗಳು ಈ ಸಂದರ್ಭದಲ್ಲಿ ಬೇಜವಾಬ್ದಾರಿ ತೋರಿದರೆ ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ಶಾಸಕರು ಊಟ ವಿತರಿಸುವುದನ್ನು ನಿಲ್ಲಿಸುವಂತೆ ಕಟ್ಟಪ್ಪಣೆ ಮಾಡಿದ್ದ ತಹಶೀಲ್ದಾರ್‌ಗೆ ತರಾಟೆ ತೆಗೆದುಕೊಂಡರು. ನಿರ್ಗತಿಕರ ಪಟ್ಟಿ ತಯಾರಿಸಿ ಕೂಡಲೇ ಅವರಿಗೆ ದವಸ, ಧಾನ್ಯದ ವ್ಯವಸ್ಥೆ ಮಾಡಿ. ಖಾಸಗಿಯವರು ಮಾನವೀಯತೆಯಿಂದ ನಿರ್ಗತಿಕರಿಗೆ ಊಟ ನೀಡುವ ಕೆಲಸ ಮಾಡುತ್ತಿರುವುದನ್ನು ತಡೆಯಬಾರದು. ಅವರಿಗೆ ಸಹಕಾರ ನೀಡಿ ಎಂದು ಸೂಚಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT