ಪರಮೇಶ್ವರ್ 
ರಾಜ್ಯ

'ಯೂಸ್‌ಲೆಸ್ ಫೆಲೊಸ್, ನಾನು ಕೇಳಿದ್ದಕ್ಕಷ್ಟೆ ಉತ್ತರ ಕೊಡಿ': ಅಧಿಕಾರಿಗಳಿಗೆ ಮಾಜಿ ಡಿಸಿಎಂ ತರಾಟೆ

ಕೊರಟಗೆರೆ ಕ್ಷೇತ್ರದ ಎಲ್ಲ ಹೋಬಳಿ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿದ್ದ ಮಾಜಿ ಡಿಸಿಎಂ ಜಿ ಪರಮೇಶ್ವರ್ ಕೊವಿಡ್-19 ಹಿನ್ನೆಲೆಯಲ್ಲೆ ಏನೆಲ್ಲ ಕ್ರಮ ವಹಿಸಲಾಗಿದೆ ಎಂದು ಪರಿಶೀಲಿಸಿದರು.

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ಎಲ್ಲ ಹೋಬಳಿ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿದ್ದ ಮಾಜಿ ಡಿಸಿಎಂ ಜಿ ಪರಮೇಶ್ವರ್ ಕೊವಿಡ್-19 ಹಿನ್ನೆಲೆಯಲ್ಲೆ ಏನೆಲ್ಲ ಕ್ರಮ ವಹಿಸಲಾಗಿದೆ ಎಂದು ಪರಿಶೀಲಿಸಿದರು.

ಹೊರಗಿನಿಂದ ತಾಲ್ಲೂಕಿಗೆ ಬಂದವರ ಮಾಹಿತಿ, ಅಂಕಿ– ಅಂಶ ನೀಡದ ಕಾರಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. `ಹೇ.. ನಾನು ಕೇಳಿದಕ್ಕಷ್ಟೇ ಉತ್ತರ ಕೊಡ್ರಿ. ಇಲ್ಲಿಯವರೆಗೂ ಏನೇನ್ ಮಾಡಿದ್ದೀರಿ ಅಂಕಿ ಅಂಶ ಕೊಡಿ. ಯೂಸ್‌ಲೆಸ್ ಫೆಲೊಸ್ ತಂದು’ ಎಂದು ಶಾಸಕ ಡಾ.ಜಿ.ಪರಮೇಶ್ವರ ಅಧಿಕಾರಿಗಳ ವಿರುದ್ಧ ಗರಂ ಆದರು.

20 ದಿನಗಳ ಹಿಂದೆ ಕ್ಷೇತ್ರಕ್ಕೆ ಬಂದಾಗ 9 ಸಾವಿರ ಜನ ತಾಲ್ಲೂಕಿಗೆ ಬೇರೆ ಬೇರೆ ಕಡೆಯಿಂದ ಬಂದಿದ್ದಾರೆ ಎಂದು ಮಾಹಿತಿ ನೀಡಲಾಗಿತ್ತು. ಬಂದವರ ವೈಯಕ್ತಿಕ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ್ದರೂ ತಾಲ್ಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆ ಬಂದವರ ಹೆಸರು, ವಿಳಾಸ, ಅಂಕಿ ಅಂಶಗಳನ್ನು ನೀಡದ ಕಾರಣ ಕೋಪಗೊಂಡ ಶಾಸಕರು, ‘ಅಧಿಕಾರಿಗಳು ಈ ಸಂದರ್ಭದಲ್ಲಿ ಬೇಜವಾಬ್ದಾರಿ ತೋರಿದರೆ ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ಶಾಸಕರು ಊಟ ವಿತರಿಸುವುದನ್ನು ನಿಲ್ಲಿಸುವಂತೆ ಕಟ್ಟಪ್ಪಣೆ ಮಾಡಿದ್ದ ತಹಶೀಲ್ದಾರ್‌ಗೆ ತರಾಟೆ ತೆಗೆದುಕೊಂಡರು. ನಿರ್ಗತಿಕರ ಪಟ್ಟಿ ತಯಾರಿಸಿ ಕೂಡಲೇ ಅವರಿಗೆ ದವಸ, ಧಾನ್ಯದ ವ್ಯವಸ್ಥೆ ಮಾಡಿ. ಖಾಸಗಿಯವರು ಮಾನವೀಯತೆಯಿಂದ ನಿರ್ಗತಿಕರಿಗೆ ಊಟ ನೀಡುವ ಕೆಲಸ ಮಾಡುತ್ತಿರುವುದನ್ನು ತಡೆಯಬಾರದು. ಅವರಿಗೆ ಸಹಕಾರ ನೀಡಿ ಎಂದು ಸೂಚಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT