ಕೊರೋನಾ ಭೀತಿ ನಡುವೆಯೂ ದೇಶ ರಕ್ಷಣೆಗೆ ಜಮ್ಮುವಿಗೆ ತೆರಳಿದ 650 ಯೋಧರು 
ರಾಜ್ಯ

ಕೊರೋನಾ ಭೀತಿ ನಡುವೆಯೂ ದೇಶ ರಕ್ಷಣೆಗೆ ಜಮ್ಮುವಿಗೆ ತೆರಳಿದ 650 ಯೋಧರು

 ಕೊರೋನಾ ಸೊಂಕಿನ ಭೀತಿಯ ನಡುವೆಯೂ ದೇಶದ ಉತ್ತರದ ಗಡಿಗಳಲ್ಲಿ ಕಾರ್ಯನಿರ್ವಹಿಸುವ ಸೇನಾಧಿಕಾರಿಗಳು ಹಾಗೂ ಯೋಧರನ್ನೊಳಗೊಂಡ 650 ಮಂದಿಯ ತಂಡ ಶುಕ್ರವಾರ ಪ್ರಯಾಣ ಬೆಳೆಸಿದೆ. 

ಬೆಂಗಳೂರು:  ಕೊರೋನಾ ಸೊಂಕಿನ ಭೀತಿಯ ನಡುವೆಯೂ ದೇಶದ ಉತ್ತರದ ಗಡಿಗಳಲ್ಲಿ ಕಾರ್ಯನಿರ್ವಹಿಸುವ ಸೇನಾಧಿಕಾರಿಗಳು ಹಾಗೂ ಯೋಧರನ್ನೊಳಗೊಂಡ 650 ಮಂದಿಯ ತಂಡ ಶುಕ್ರವಾರ ಪ್ರಯಾಣ ಬೆಳೆಸಿದೆ.

ಕೊರೊನಾ ಸೋಂಕು ಹರಡದಂತೆ ತಡೆಯಲು ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಯೋಧರ ತಂಡ ನಗರದ ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣದಿಂದ ಜಮ್ಮುವಿಗೆ ಮಿಲಿಟರಿ ವಿಶೇಷ ರೈಲಿನಲ್ಲಿ ಪ್ರಯಾಣ ಬೆಳೆಸಿತು.

ಯೋಧರ ಪ್ರಯಾಣಕ್ಕಾಗಿ ಸಜ್ಜುಗೊಳಿಸಿರುವ ವಿಶೇಷ ಮಿಲಿಟರಿ ರೈಲು ಸೋಂಕುರಹಿತವಾಗಿರುವಂತೆ ನೋಡಿಕೊಳ್ಳಲು ಸಂಪೂರ್ಣ ರೈಲಿನ ಒಳಗೆ ಹಾಗೂ ಬೋಗಿಗಳ ಒಳಗೆ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಲಾಗಿದೆ. ಸೈನಿಕರಿಗೆ ಮಾಸ್ಕ್ ಹಾಗೂ ಕೈಗವಸುಗಳನ್ನು ಧರಿಸುವ ಮೂಲಕ ಮುನ್ನೆಚ್ಚರಿಕೆ ವಹಿಸಿದ್ದಾರೆ. ಯೋಧರ ಲಗೇಜುಗಳ ಮೂಲಕವೂ ಸೋಂಕು ಹಬ್ಬದಂತೆ ನಿಗಾ ವಹಿಸಲಾಗಿದೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT