ಗೋಪಾಲಯ್ಯ 
ರಾಜ್ಯ

ಎಪಿಎಲ್ ಫಲಾನುಭವಿಗಳಿಗೂ ಮೇ 1 ರಿಂದ ಅಗ್ಗದ ದರದಲ್ಲಿ ಪಡಿತರ ಪೂರೈಕೆ: ಗೋಪಾಲಯ್ಯ

ಕೇಂದ್ರ ದಿಂದ ರಾಜ್ಯಕ್ಕೆ ಸಾಕಷ್ಟು ಪಡಿತರ ದಾಸ್ತಾನು ಬಂದಿದ್ದು ಮೇ ಒಂದರಿಂದ ಎಪಿಎಲ್ ಪಡಿತರ ಚೀಟಿದಾರರಿಗೂ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ಪೂರೈಕೆಯಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. 

ಬೆಂಗಳೂರು: ಕೇಂದ್ರ ದಿಂದ ರಾಜ್ಯಕ್ಕೆ ಸಾಕಷ್ಟು ಪಡಿತರ ದಾಸ್ತಾನು ಬಂದಿದ್ದು ಮೇ ಒಂದರಿಂದ ಎಪಿಎಲ್ ಪಡಿತರ ಚೀಟಿದಾರರಿಗೂ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ಪೂರೈಕೆಯಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. 

ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು ಸಾಕಷ್ಟು ದಾಸ್ತಾನು ಬಂದಿದ್ದು, ಯಾವುದೇ ಕೊರತೆ ಇಲ್ಲ ಒಂದು ವರ್ಷಕ್ಕಿಂತಲೂ ಹೆಚ್ಚಿನ ದಾಸ್ತಾನು ರಾಜ್ಯದಲ್ಲಿ ಲಭ್ಯವಿದೆ ಎಂದು ಹೇಳಿದರು. 
ಇದೆ 30ನೇ ರೊಳಗೆ ಎಲ್ಲಾ ಪಡಿತರ ಅಂಗಡಿಗಳಿಗೆ ದವಸ ಧಾನ್ಯಗಳ ಪೂರೈಕೆಗೆ ಕ್ರಮ ವಹಿಸಲಾಗಿದೆ ಮೇ ಒಂದರಿಂದ ಎಪಿಎಲ್ ಪಡಿತರ ಚೀಟಿದಾರರಿಗೂ ಕೆಜಿ ಗೆ 15ರೂ ದರದಲ್ಲಿ 10 ಕೆಜಿ ಅಕ್ಕಿ ಜೊತೆಗೆ , 1ಕೆಜಿ ತೊಗರಿ ಬೇಳೆ ವಿತರಣೆ ಮಾಡಲಾಗುತ್ತದೆ ಅವರು ಹೇಳಿದರು. 

ಶೇಕಡಾ 91ರಷ್ಟು ಪಡಿತರ ಅಂಗಡಿಗಳಲ್ಲಿ ಎರಡು ತಿಂಗಳ ಪಡಿತರ ವಿತರಣೆಯಾಗಿದ್ದು, ರಾಜ್ಯದ ಇತಿಹಾಸದಲ್ಲಿ ದಾಖಲೆಯಾಗಿದೆ ಎಂದರು.  2.22 ಲಕ್ಷ ಬಿಪಿಎಲ್ ಕಾರ್ಡ್ ಗೆ ಅರ್ಜಿ ಹಾಕಿದ್ದು, 1.90 ಲಕ್ಷ ಅರ್ಜಿ ವಿಲೇವಾರಿ ಆಗಬೇಕು. ಅರ್ಜಿ ಹಾಕಿದವರಿಗೂ ಪಡಿತರ ಆಹಾರ ಸಮಾಗ್ರಿಯನ್ನು ಪೂರೈಕೆ ಮಾಡಲಾಗುವುದು ಎಂದು ಎಂದರು. 

ಮುಗ್ಗಲು ಅಕ್ಕಿ ವಿತರಣೆ ಕಂಡುಬಂದರೆ ಕ್ರಮ ಜರುಗಿಸುವಾದಿ ಎಚ್ಚರಿಕೆ ನೀಡಿದ ಸಚಿವರು ಈವರಗೆ 12,558 ಪಡಿತರ ಅಂಗಡಿಗಳ ಮೇಲೆ ಈವರೆಗೆ ದಾಳಿ ಮಾಡಲಾಗಿದೆ ಉಜ್ವಲ ಮತ್ತು ಸಿಎಂ ಅನಿಲ ಭಾಗ್ಯ ಯೋಜನೆಯನ್ನು ಮೂರು ತಿಂಗಳ ವರೆಗೂ ವಿಸ್ತರಿಸಲಾಗಿದೆ ಎಂದೂ ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT