ಬಳ್ಲಾರಿ: ಲಾಕ್ ಡೌನ್ ಮಜಾ, ನದಿಯಲ್ಲಿ ಮುಳುಗಿ ಮೂವರ ದುರ್ಮರಣ 
ರಾಜ್ಯ

ಬಳ್ಳಾರಿ: ಲಾಕ್ ಡೌನ್ ಮಜಾ, ನದಿಯಲ್ಲಿ ಮುಳುಗಿ ಮೂವರ ದುರ್ಮರಣ

ಲಾಕ್​ಡೌನ್​ ಘೋಷಿಸಿರುವ ಹಿನ್ನೆಲೆಯಲ್ಲಿ ಸರಣಿ ರಜೆ ಇದ್ದ ಕಾರಣ ಮನೆಯಲ್ಲಿದ್ದ ಮೂವರು ಈಜಿನ ಮಜ ನೋಡಲು ಹೋಗಿ ದುರ್ಣರಣಕ್ಕೀಡಾಗಿದ್ದಾರೆ.

ಹಡಗಲಿ: ಲಾಕ್​ಡೌನ್​ ಘೋಷಿಸಿರುವ ಹಿನ್ನೆಲೆಯಲ್ಲಿ ಸರಣಿ ರಜೆ ಇದ್ದ ಕಾರಣ ಮನೆಯಲ್ಲಿದ್ದ ಮೂವರು ಈಜಿನ ಮಜ ನೋಡಲು ಹೋಗಿ ದುರ್ಣರಣಕ್ಕೀಡಾಗಿದ್ದಾರೆ.

ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರ ಪೈಕಿ ಮೂವರು ಕಾರ್ಮಿಕರು ಕೊಚ್ಚಿ ಹೋಗಿದ್ದಾರೆ. ಇಬ್ಬರು ಈಜಿ ದಡ ಸೇರಿದ್ದಾರೆ. ನೀರುಪಾಲಾದವರನ್ನು ಸೋವೇನಹಳ್ಳಿ ಗ್ರಾಮದ ನಿವಾಸಿ ಕೋಗಳಿ ಮಾರುತಿ (23), ಮಲ್ಲಿನಕೆರೆ ಸುರೇಶ (25) ಹಾಗೂ ಹಂಪಸಾಗರ ಗ್ರಾಮದ ಪಿ.ಫಕರುದ್ದೀನ್ (25) ಎಂದು ಗುರುತಿಸಲಾಗಿದೆ. ಇವರಲ್ಲಿ ಮಲ್ಲಿನಕೆರೆ ಸುರೇಶ ಜಿಂದಾಲ್ ಸಂಸ್ಥೆಯ ನೌಕರನಾಗಿದ್ದರೆ ಇನ್ನಿಬ್ಬರು ಕೂಲಿ ಕಾರ್ಮಿಕರಾಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾಮದ ಬಳಿ‌ ದುರ್ಘಟನೆ ವರದಿಯಾಗಿದೆ. ಮೃತದೇಹಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದ್ದು ಘಟನೆ ಸಂಬಂಧ  ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT