ರಾಜ್ಯ

ಲಾಕ್ ಡೌನ್ ಮಧ್ಯೆ ಓಪನ್ ಆಗಿದ್ದ ಬಾರ್ ಮೇಲೆ ದಾಳಿ, ಲಕ್ಷಾಂತರ ರೂ. ಮೌಲ್ಯದ ಮದ್ಯ ವಶ

Nagaraja AB

ಹೂವಿನಹಡಗಲಿ:ಲಾಕ್ ಡೌನ್ ಮಧ್ಯೆಯೂ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ.

ಹೂವಿನಹಡಗಲಿ ತಾಲೂಕಿನ ಹ್ಯಾರಡ ಗ್ರಾಮದ  ಶಾಂತಿ ಬಾರ್  &   ರೆಸ್ಟೋರೆಂಟ್ ಮೇಲೆ  ಹೂವಿನಹಡಗಲಿ ಅಬಕಾರಿ ಉಪ -ನಿರೀಕ್ಷಕಿ ನೇತ್ರಾ ಉಪ್ಪಾರ ನೇತೃತ್ವದಲ್ಲಿ ದಾಳಿ ನಿನ್ನೆ ರಾತ್ರಿ  ದಾಳಿ ನಡೆಸಲಾಗಿದೆ.

ದಾಳಿ ವೇಳೆಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ  7 ಲಕ್ಷದ 32 ಸಾವಿರದ 475 ರೂ. ಮೌಲ್ಯದ ಮದ್ಯ ಹಾಗೂ ಮದ್ಯ ಸಾಗಾಟಕ್ಕೆ ಬಳಸಿದ್ದ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ.

ಬಂಧನ ಭೀತಿಯಲ್ಲಿ ಬಾರ್ ಮಾಲೀಕ ಪ್ರಭಾಕರ್ ಲಕ್ಕಪ್ಪನವರ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

SCROLL FOR NEXT