ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಒಂದೇ ದಿನ 36 ಜನರಲ್ಲಿ ವೈರಸ್ ಪತ್ತೆ: ಫಾರ್ಮಾ ಕಂಪನಿ ಮತ್ತು ಜಮಾತ್ ಪಾಲು ಹೆಚ್ಚು!

ದಿನೇ ದಿನೇ ತನ್ನ ಪ್ರಭಾವವನ್ನು ಹೆಚ್ಚಿಸುತ್ತಿರುವ ಕೊರೋನಾ ವೈರಸ್ ಗುರುವಾರ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟಿಸಿದೆ. ಒಂದೇ ದಿನ ದಾಖಲೆಯ 36 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 315ಕ್ಕೇರಿದೆ. 

ಬೆಂಗಳೂರು: ದಿನೇ ದಿನೇ ತನ್ನ ಪ್ರಭಾವವನ್ನು ಹೆಚ್ಚಿಸುತ್ತಿರುವ ಕೊರೋನಾ ವೈರಸ್ ಗುರುವಾರ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟಿಸಿದೆ. ಒಂದೇ ದಿನ ದಾಖಲೆಯ 36 ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 315ಕ್ಕೇರಿದೆ. 

ಈ ಹಿಂದೆ ಬುಧವಾರವಷ್ಟೇ 19 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ವರೆಗಿನ ದಾಖಲೆಯಾಗಿತ್ತು. ಈ ಮಧ್ಯೆ ಮಾ.9ಕ್ಕೆ ರಾಜ್ಯದಲ್ಲಿ ಮೊದಲ ಪ್ರಕರಣ ದೃಢಪಟ್ಟ 25 ದಿನಗಳ ಬಳಿಕ 150ನೇ ಸೋಂಕು ಖಚಿತಗೊಂಡಿತ್ತು. ಇದೀಗ 10 ದಿನಗಳಲ್ಲಿ ಆ ಸಂಖ್ಯೆ ದ್ವಿಗುಣಗೊಂಡಿದೆ. 

ಆತಂಕಕಾರಿ ವಿಚಾರವೆಂದರೆ ಗುರುವಾರ ಬೆಳಗಾವಿಯೊಂದರಲ್ಲಿಯೇ 17 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 36ಕ್ಕೇರಿದೆ. ಅವರೆಲ್ಲಾ ದೆಹಲಿಯ ತಬ್ಲೀಘಿ ಜಮಾತ್ ನಲ್ಲಿ ಪಾಲ್ಗೊಂಡವರು ಅಥವಾ ಅವರ ಜೊತೆಗೆ ಸಂಪರ್ಕ ಹೊಂದಿದ್ದವರಾಗಿದ್ದಾರೆಂದು ಹೇಳಲಾಗುತ್ತಿದೆ. 

ಇದರೊಂದಿಗೆ ರಾಜ್ಯದಲ್ಲಿ ತಬ್ಲೀಘಿ ನಂಟಿನ ಪ್ರಕರಣಗಳ ಸಂಖ್ಯೆ 46ಕ್ಕೇರಿದೆ. ಇನ್ನು ವಿಜಯಪುರದಲ್ಲಿ 7, ಬೆಂಗಳೂರು 5, ಮೈಸೂರು ಕಲಬುರಗಿಯಲ್ಲಿ ತಲಾ 3 ಹಾಗೂ ಗದಗದಲ್ಲಿ 1 ಸೋಂಕು ಪ್ರಕರಣ ದೃಢಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,

ರಾಜ್ಯದಲ್ಲಿ 315 ಪ್ರಕರಣಗಳಲ್ಲಿ 46 ಪ್ರಕರಣಗಳು ದೆಹಲಿಯ ನಿಜಾಮುದ್ದೀನ್ ತಬ್ಲೀಘಿ ಜಮಾತ್'ನಲ್ಲಿ ಭಾಗಿಯಾಗಿದ್ದವರು ಮತ್ತು ಅವರ ಸಂಪರ್ಕ ಪಡೆದವರದ್ದಾಗಿವೆ. 

ನಿನ್ನೆ ಬೆಳಗಾವಿಯಲ್ಲಿ ಪತ್ತೆಯಾಗಿರುವ 17ರಲ್ಲಿ 5 ಪ್ರಕರಣಗಳು ದೆಹಲಿಗೆ ಹೋಗಿ ಬಂದ ತಬ್ಲೀಘಿಗಳಲ್ಲಿ ಪತ್ತೆಯಾಗಿದೆ. ಹೀಗಾಗಿ ನೇರವಾಗಿ ಜಮಾತ್'ನಲ್ಲಿ ಪಾಲ್ಗೊಂಡು ಬಂದ 46 ಜನರಲ್ಲಿ ಸೋಂಕು ದೃಢಪಟ್ಟಿದೆ. 

ಇದರಂತೆ ಮೈಸೂರಿನ ನಂಜನಗೂಡಿನ ಔಷಧಿ ಕಂಪನಿಯೊಂದಿಗೆ ಸಂಪರ್ಕ ಹೊಂದಿದ್ದ 49 ಮಂದಿಯಲ್ಲೂ ವೈರಸ್ ದೃಢಪಟ್ಟಿದೆ. 

ಸೋಂಕಿತ ಪ್ರಕರಣಗಳು ಇದೇ ರೀತಿ ದಾಖಲಾಗುತ್ತಿದ್ದರೆ, ಗ್ರಾಮೀಣ ಪ್ರದೇಶಗಳನ್ನು ಸಂಪೂರ್ಣವಾಗಿ ಸೀಲ್ ಮಾಡಲಾಗುತ್ತದೆ. ಜನರು ಸಂಪೂರ್ಣವಾಗಿ ನಿಯಮವನ್ನ ಪಾಲನೆ ಮಾಡುತ್ತಿಲ್ಲ. ಶೇ.100ರಷ್ಟು ಲಾಕ್'ಡೌನ್ ಪಾಲನೆಯಾಗುತ್ತಿಲ್ಲ. ಲಾಕ್'ಡೌನ್ ಪರಿಣಾಮಕಾರಿಯಾಗಿಲ್ಲ. ಕಂಟೇನ್ಮೆಂಟ್ ಝೋನ್ ನಲ್ಲಿ ಯಾರೊಬ್ಬರೂ ಒಳಗೆ ಬರುವಂತಿಲ್ಲ ಹಾಗೂ ಹೊರಗೆ ಹೋಗುವಂತಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT