ಸಿಎಂ ಬಿಎಸ್ ವೈ ಮತ್ತು ನಿಖಿಲ್ ವಿವಾಹ 
ರಾಜ್ಯ

ಎಚ್ ಡಿಕೆ ಅವರದ್ದು ದೊಡ್ಡ ಕುಟುಂಬ, ಆದರೂ ನಿಖಿಲ್ ವಿವಾಹ ಸರಳವಾಗಿ ನಡೆದಿದೆ: ಸಿಎಂ ಬಿಎಸ್ ಯಡಿಯೂರಪ್ಪ

ಎಚ್ ಡಿ ಕುಮಾರಸ್ವಾಮಿ ಅವರದ್ದು ದೊಡ್ಡ ಕುಟುಂಬ.. ಆದರೆ ನಿಖಿಲ್ ಮತ್ತು ರೇವತಿ ವಿವಾಹ ಸರಳವಾಗಿ ನಡೆದಿದೆ. ಈ ಬಗ್ಗೆ ಚರ್ಚೆ ಅನಗತ್ಯ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ಎಚ್ ಡಿ ಕುಮಾರಸ್ವಾಮಿ ಅವರದ್ದು ದೊಡ್ಡ ಕುಟುಂಬ.. ಆದರೆ ನಿಖಿಲ್ ಮತ್ತು ರೇವತಿ ವಿವಾಹ ಸರಳವಾಗಿ ನಡೆದಿದೆ. ಈ ಬಗ್ಗೆ ಚರ್ಚೆ ಅನಗತ್ಯ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಏಪ್ರಿಲ್ 20ರ ಬಳಿಕ ರಾಜ್ಯದಲ್ಲಿ ಹೇರಲಾಗಿರುವ ಲಾಕ್ ಡೌನ್ ವೇಳೆ ಯಾವೆಲ್ಲಾ ಕ್ಷೇತ್ರದಲ್ಲಿ ವಿನಾಯಿತಿ ನೀಡಬೇಕು ಎಂಬ ವಿಚಾರದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದರು. ಈ ವೇಳೆ ಸುದ್ದಿಗಾರರೊಬ್ಬರು ನಿಖಿಲ್  ಕುಮಾರಸ್ವಾಮಿ-ರೇವತಿ ವಿವಾಹ ವಿಚಾರ ಪ್ರಸ್ತಾಪಿಸಿ ವಿವಾಹದ ವೇಳೆ ಲಾಕ್ ಡೌನ್ ನಿಯಮ ಉಲ್ಲಂಘನೆ ಕುರಿತು ಪ್ರಶ್ನಿಸಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕುಮಾರಸ್ವಾಮಿ ಮತ್ತು ದೇವೇಗೌಡರದ್ದು ದೊಡ್ಡ ಕುಟುಂಬ. ಆದರೂ ತುಂಬಾ  ಸರಳವಾಗಿ ವಿವಾಹ ನಡೆಸಿದ್ದಾರೆ. ವಿವಾಹದ ವೇಳೆ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿನಡಿಯಲ್ಲೇ ವಿವಾಹ ಜರುಗಿದ್ದು, ಈ ಬಗ್ಗೆ ಅನಗತ್ಯ ಚರ್ಚೆ ಬೇಡ. ನೂತನ ವಧು-ವರರಿಗೆ ನಾನು ಶುಭಾಶಯ ಕೋರುತ್ತೇನೆ ಎಂದು ಹೇಳಿದರು.

ಅಂತೆಯೇ ಪಬ್, ಬಾರ್, ಹೋಟೆಲ್, ಮಾಲ್ ಯಾವುದೂ ಇರಲ್ಲ. ವಾಣಿಜ್ಯ ಉದ್ದೇಶದ ಶಾಪ್ ಓಪನ್ ಇರಲ್ಲ. ಅಲ್ಲದೇ ಬಸ್‍ಗಳ ಸಂಚಾರ ಇರಲ್ಲ. ಆದರೆ ಕಂಪನಿಗಳ ಬಸ್‍ಗಳು ಓಡಾಟ ಮಾಡಬಹುದು. ಲಾಕ್‍ಡೌನ್ ಮುಗಿಯುವ ಮೇ 3ರ ತನಕ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ  ಮಾಡಲಾಗಿದೆ. ಹೀಗಾಗಿ ಮೇ 3ರ ನಂತರ ಮದ್ಯ ಮಾರಾಟಕ್ಕೆ ತೀರ್ಮಾನ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT