ರಾಜ್ಯ

ಲಾಕ್ ಡೌನ್ ಮಧ್ಯೆ ಹತಾಶೆಯಿಂದ ಲಿಕ್ಕರ್, ಬೀರ್ ಸಿಗದೆ ಸ್ಯಾನಿಟೈಸರ್ ಕುಡಿಯುತ್ತಿರುವ ಮದ್ಯಪ್ರಿಯರು!

ಕೊರೋನಾ ವೈರಸ್ ಸೋಂಕು ವಿರುದ್ಧ ಮುನ್ನೆಚ್ಚರಿಕೆ ಕೈಗೊಳ್ಳಲು ಎಲ್ಲಾ ಕಡೆಗಳಲ್ಲಿ ಸ್ಯಾನಿಟೈಸರ್, ಮಾಸ್ಕ್, ಗ್ಲೌಸ್ ಬಳಸಲಾಗುತ್ತದೆ. ಆಲ್ಕೊಹಾಲ್ ಆಧಾರಿತ ಕೈ ಸ್ವಚ್ಛಗೊಳಿಸುವ ಸ್ಯಾನಿಟೈಸರ್ ಗಳನ್ನು ಬಳಸಲಾಗುತ್ತದೆ. ಆದರೆ ಕೆಲವು ಮದ್ಯವ್ಯಸನಿಗಳು ಹತಾಶೆಯಿಂದ ಮದ್ಯ ಸಿಗದಿರುವಾಗ ಸ್ಯಾನಿಟೈಸರ್ ಕುಡಿಯುತ್ತಿರುವುದು ಬೆಳಕಿಗೆ ಬಂದಿದೆ.

ಬೆಂಗಳೂರು: ಕೊರೋನಾ ವೈರಸ್ ಸೋಂಕು ವಿರುದ್ಧ ಮುನ್ನೆಚ್ಚರಿಕೆ ಕೈಗೊಳ್ಳಲು ಎಲ್ಲಾ ಕಡೆಗಳಲ್ಲಿ ಸ್ಯಾನಿಟೈಸರ್, ಮಾಸ್ಕ್, ಗ್ಲೌಸ್ ಬಳಸಲಾಗುತ್ತದೆ. ಆಲ್ಕೊಹಾಲ್ ಆಧಾರಿತ ಕೈ ಸ್ವಚ್ಛಗೊಳಿಸುವ ಸ್ಯಾನಿಟೈಸರ್ ಗಳನ್ನು ಬಳಸಲಾಗುತ್ತದೆ. ಆದರೆ ಕೆಲವು ಮದ್ಯವ್ಯಸನಿಗಳು ಹತಾಶೆಯಿಂದ ಮದ್ಯ ಸಿಗದಿರುವಾಗ ಸ್ಯಾನಿಟೈಸರ್ ಕುಡಿಯುತ್ತಿರುವುದು ಬೆಳಕಿಗೆ ಬಂದಿದೆ.

ಲಿಕ್ಕರ್ ಸಿಗದಿರುವಾಗ ಆಲ್ಕೊಹಾಲ್ ಆಧಾರಿತ ಸ್ಯಾನಿಟೈಸರ್ ಬಳಸುವುದು ಕಂಡುಬರುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಕೆಲ ಪ್ರಕರಣಗಳು ವರದಿಯಾಗಿವೆ. ನೀರಿನಲ್ಲಿ ಬೆರೆಸಿ ಸ್ಯಾನಿಟೈಸರ್ ಗಳನ್ನು ಕುಡಿಯುವುದು ಆರೋಗ್ಯಕ್ಕೆ ಮಾರಕ. ಸ್ಯಾನಿಟೈಸರ್ ನಲ್ಲಿ ಶೇಕಡಾ 70ರಷ್ಟು ಆಲ್ಕೊಹಾಲ್, ಗ್ಲಿಸರಿನ್ ಮತ್ತು ಹೈಡ್ರೊಜನ್ ಪೆರಾಕ್ಸೈಡ್ ಗಳಿದೆ.

ವಿಸ್ಕಿಯಲ್ಲಿ ಶೇಕಡಾ 40ರಷ್ಟು ಆಲ್ಕೊಹಾಲ್ ಇರುತ್ತದೆ. ಹೈಡ್ರೊಜನ್ ಪೆರೊಕ್ಸೈಡ್ ಮೂತ್ರಪಿಂಡ ಮತ್ತು ಯಕೃತ್ತಿಗೆ ಅಪಾಯಕಾರಿಯಾಗಿದೆ ಎಂದು ಮೂಲಗಳು ಹೇಳುತ್ತವೆ.

ಸ್ಯಾನಿಟೈಸರ್ ಮಾರಾಟ ಮಾಡುವ ಮೊದಲು ಸಂಬಂಧಪಟ್ಟವರಿಂದ ಅನುಮತಿ ಪಡೆದಿರಬೇಕು. ಈ ಮಧ್ಯೆ ಅಕ್ರಮವಾಗಿ ಲಿಕ್ಕರ್, ಬೀರ್ ಮಾರಾಟ ಕರ್ನಾಟಕದಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಅಬಕಾರಿ ಇಲಾಖೆಯ ಪ್ರಕಾರ ಕಳೆದ ತಿಂಗಳು ಮಾರ್ಚ್ 24ರಿಂದ ಏಪ್ರಿಲ್ 15ರವರೆಗೆ ರಾಜ್ಯದಲ್ಲಿ 32 ಸಾವಿರದ 508.305 ಲೀಟರ್ ಅಕ್ರಮ ಲಿಕ್ಕರ್, 22 ಸಾವಿರದ 208.275 ಲೀಟರ್ ಬೀರ್ ಗಳನ್ನು ವಶಪಡಿಸಿಕೊಂಡು 417 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜನರು ಅಕ್ರಮ ಮಾರುಕಟ್ಟೆಯಲ್ಲಿ ಇಂಡಿಯನ್ ಮೇಡ್ ಲಿಕ್ಕರ್ (ಐಎಂಎಲ್) ಮತ್ತು ಬಿಯರ್ ಅನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT