ಸಾಂದರ್ಭಿಕ ಚಿತ್ರ 
ರಾಜ್ಯ

ಸಂಪನ್ಮೂಲ ಕ್ರೋಡೀಕರಣಕ್ಕೆ ಅಕ್ರಮ-ಸಕ್ರಮ ಮರು ಜಾರಿಗೆ ನಿರ್ಧಾರ: 35 ಲಕ್ಷ ಕಟ್ಟಡಗಳ ಸಕ್ರಮಕ್ಕೆ ತೀರ್ಮಾನ

ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಿರುವ ಸುಮಾರು 35 ಲಕ್ಷಕ್ಕೂ ಹೆಚ್ಚಿನ ಕಟ್ಟಡಗಳನ್ನು ಅಕ್ರಮ–ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್‌–19 ನಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಈ ಮೂಲಕ ಆದಾಯ ಸಂಗ್ರಹಿಸಲು ಮುಂದಾಗಿದೆ. 

ಬೆಂಗಳೂರು: ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ನಿರ್ಮಿಸಿರುವ ಸುಮಾರು 35 ಲಕ್ಷಕ್ಕೂ ಹೆಚ್ಚಿನ ಕಟ್ಟಡಗಳನ್ನು ಅಕ್ರಮ–ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್‌–19 ನಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಈ ಮೂಲಕ ಆದಾಯ ಸಂಗ್ರಹಿಸಲು ಮುಂದಾಗಿದೆ. 

ಬಿಬಿಎಂಪಿ ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ, ನಗರಸಭೆಗಳ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಬಾಹಿರವಾಗಿ ಕಟ್ಟಿಕೊಂಡಿರುವ ಮನೆಗಳನ್ನು ಸಕ್ರಮಗೊಳಿಸಲು ಸರಕಾರ ಬಯಸಿದ್ದು, 2 ತಿಂಗಳಲ್ಲಿ ಈ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ಈ ಬೆಳವಣಿಗೆ ರಾಜಧಾನಿ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ರೆವೆನ್ಯೂ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಂಡಿರುವ ಲಕ್ಷಾಂತರ ಕುಟುಂಬಗಳಲ್ಲಿ ಹೊಸ ಭರವಸೆ ಮೂಡಿಸಿದೆ.

ಸದ್ಯ ಸುಪ್ರೀಂಕೋರ್ಟ್‌ ಮುಂದಿರುವ ಈ ಪ್ರಕರಣದ ಇತ್ಯರ್ಥಕ್ಕೆ ತುರ್ತು ಕ್ರಮ ವಹಿಸುವ ಮೂಲಕ 2007ರಲ್ಲಿ ರೂಪುಗೊಂಡ ‘ಅಕ್ರಮ - ಸಕ್ರಮ’ ಯೋಜನೆ ಅನುಷ್ಠಾನಕ್ಕೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಿರ್ಧರಿಸಿತು.

ಪರ್ಯಾಯ ಆರ್ಥಿಕ ಮೂಲಗಳ ಹುಡುಕಾಟಕ್ಕಾಗಿ ರಚನೆಯಾಗಿರುವ ಅಧಿಕಾರಿಗಳ ಸಮಿತಿಯ ಸಲಹೆಯಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಮಾಲೀಕರಿಗೆ ಅನುಕೂಲವಾಗುವ ಜತೆಗೆ ತೆರಿಗೆ ಮತ್ತು ದಂಡದ ರೂಪದಲ್ಲಿ ಆದಾಯ ದೊರೆಯಲಿದೆ. ಬಿಡಿಎ ವ್ಯಾಪ್ತಿಯ ಅಕ್ರಮ ಆಸ್ತಿಗಳ ಸಕ್ರಮಕ್ಕೂ ಕಾನೂನು ತಿದ್ದುಪಡಿಗೆ ಈಗಾಗಲೇ
ನಿರ್ಧಾರವಾಗಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಅಕ್ರಮ ಸಕ್ರಮ ಯೋಜನೆಯನ್ನು ಪ್ರಶ್ನಿಸಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್‌ ಅಧ್ಯಕ್ಷತೆಯ ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಸುಪ್ರಿಂಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಶುಕ್ರವಾರ ನಡೆದ ಸಭೆಯಲ್ಲಿ ರಾಜೀವ್ ಚಂದ್ರಶೇಖರ್‌ ಅವರೂ ಹಾಜರಿದ್ದರು. ಮೊಕದ್ದಮೆಯನ್ನು ಹಿಂದಕ್ಕೆ ಪಡೆಯಲು ಅವರನ್ನು ಕೋರಲಾಯಿತು. ‘ಬಡವರಿಗೆ ಅನುಕೂಲ ಆಗುವ ಹಾಗಿದ್ದರೆ, ಅರ್ಜಿ ಹಿಂದಕ್ಕೆ ಪಡೆಯಲು ತಮ್ಮ ತಕರಾರು ಇಲ್ಲ’ ಎಂದು ಹೇಳಿದರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT