ರಾಜ್ಯ

ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಲು ಸಚಿವ ಡಾ. ನಾರಾಯಣ ಗೌಡ ಸಿಎಂಗೆ ಮನವಿ

ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಸಚಿವ ಡಾ. ನಾರಾಯಣ ಗೌಡ ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ರೇಷ್ಮೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಸಚಿವ ಡಾ. ನಾರಾಯಣ ಗೌಡ ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಅವರು ನಿನ್ನೆ ಸಿಎಂ ಯಡಿಯೂರಪ್ಪ ಅವರನ್ನ ಸಿಎಂ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಅಗತ್ಯ ಅನುದಾನದ ವಿಚಾರವಾಗಿ ಡಿಸಿಎಂ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರು ಪ್ರಸ್ತಾಪಿಸಿದ್ದರು.

 ರೇಷ್ಮೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸಲೇಬೇಕು. ಈಗಾಗಲೇ ಇಲಾಖೆಯಿಂದ ರೇಷ್ಮೆ ನೂಲು ಬಿಚ್ಚಣಿಕೆದಾರರ ಕಚ್ಚಾ ರೇಷ್ಮೆಯನ್ನು ಅಡಮಾನವಾಗಿ ಇಟ್ಟು ಸಾಲ ನೀಡಲಾಗುತ್ತಿದೆ. ಹೀಗಾಗಿ ಹೆಚ್ಚಿನ ಅನುದಾನ ದೊರಕಿದಲ್ಲಿ, ರೇಷ್ಮೆ ಬೆಳೆಗಾರರ ಸಮಸ್ಯೆಯನ್ನು ಪರಿಹರಿಸಬಹುದು. ಅದಕ್ಕೆ ಅಗತ್ಯ ಇರುವ ಅನುದಾನ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಇಲಾಖೆಯಿಂದ ಈಗಾಗಲೆ ಪ್ರಸ್ತಾವನೆ ಕೂಡ ಸಿದ್ದಪಡಿಸಲಾಗಿದೆ ಎಂದು ಸಭೆಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಅವರ ಮುಂದೆ ಪ್ರಸ್ತಾಪಿಸಿದ್ದರು.

ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಕೊವಿಡ್ - 19 ಸಂಬಂಧದ ಲಾಕ್ ಡೌನ್ ಪರಿಸ್ಥಿತಿಯಲ್ಲಿ ರೇಷ್ಮೆ ಗೂಡಿನ ದರ ಕುಸಿಯುತ್ತಿರುವುದರಿಂದ ಹಾಗೂ ಈ ರೇಷ್ಮೆ ಗೂಡನ್ನು ಖರೀದಿಸುವ ರೇಷ್ಮೆ ನೂಲು ಬಿಚ್ಚಣಿಕೆದಾರರು ಕಡಿಮೆ ದರದಲ್ಲಿ ಖರೀದಿಸುತ್ತಿರುವುದರಿಂದ ರಾಜ್ಯಾದ್ಯಂತ ಸುಮಾರು ಒಂದೂವರೆ ಲಕ್ಷ ರೇಷ್ಮೆ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿಗಳಲ್ಲಿ ಸಚಿವ ಡಾ. ನಾರಾಯಣ ಗೌಡ ಅವರು ವಿವರಿಸಿದ್ದಾರೆ. ರೇಷ್ಮೆ ಇಲಾಖೆಗೆ ಅಗತ್ಯವಿರುವ 50 ಕೋಟಿ ರೂಪಾಯಿ ಅನುದಾನವನ್ನು ಒದಗಿಸುವಂತೆ ಸಹ ಸಚಿವ ಡಾ. ನಾರಾಯಣಗೌಡ ಅವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಸಚಿವರ ಮನವಿಯನ್ನ ಆಲಿಸಿರುವ ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಅನುಮೋದನೆ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT