ಬಂದ್ ಆಗಿರುವ ಜೆನರಿಕ್ ಔಷಧಿ ಮಳಿಗೆ 
ರಾಜ್ಯ

ಮಂಡ್ಯ: ಕೊರೋನಾ ಕಷ್ಟಕಾಲದಲ್ಲೇ 'ಜೆನರಿಕ್’ ಔಷಧಿ ಮಳಿಗೆ ಬಂದ್!

ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಜನ ಸಂಜೀವಿನಿ ಜೆನರಿಕ್  ಔಷಧಿ ಮಳಿಗೆ ಕಳೆದ ೧೦ ದಿನಗಳಿಂದಲೂ ಬಾಗಿಲು ಮುಚ್ಚಿದ್ದು ರಿಯಾಯಿತಿ ದರದಲ್ಲಿ ಔಷಧಿ ಸಿಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ

ಮಂಡ್ಯ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಜನ ಸಂಜೀವಿನಿ ಜೆನರಿಕ್  ಔಷಧಿ ಮಳಿಗೆ ಕಳೆದ ೧೦ ದಿನಗಳಿಂದಲೂ ಬಾಗಿಲು ಮುಚ್ಚಿದ್ದು ರಿಯಾಯಿತಿ ದರದಲ್ಲಿ ಔಷಧಿ ಸಿಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಖಾಸಗಿ ಔಷಧಿ ಅಂಗಡಿಗಳು ನಿತ್ಯವೂ ಬೆಳಿಗ್ಗೆಯಿಂದ ರಾತ್ರಿಯ ವರೆಗೂ ರೋಗಿಗಳಿಗೆ ಬೇಕಾದ ಅಗತ್ಯ ಔಷಧಿಗಳನ್ನು ಪೂರೈಸುತ್ತಿವೆ ಆದರೆ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ತೆರೆಯಲಾಗಿರುವ ಜೆನರಿಕ್ ಔಷಧಿ ಮಳಿಗೆ ಬಂದ್ ಆಗಿರುವುದರಿಂದ ರೋಗಿಗಳಿಗೆ ಬೇಕಾದ ಅಗತ್ಯ ಔಷಧಿಗಳು ರಿಯಾಯಿತಿ ದರದಲ್ಲಿ ದೊರೆಯದೆ ಪರಿತಪಿಸುವಂತಾಗಿದೆ

ಕಳೆದ ೧೦ ದಿನಗಳಿಂದ ಜೆನರಿಕ್ ಬಾಗಿಲು ತೆಗೆಯದೇ ಇರುವುದರಿಂದ ವಿಧಿಯಿಲ್ಲದೆ ರೋಗಿಗಳು ಹಾಗೂ ಸಾರ್ವಜನಿಕರು ಹೆಚ್ಚು ಹಣ ನೀಡಿ ಖಾಸಗಿ ಔಷಧಿ ಅಂಗಡಿಗಳಿಂದ  ಔಷಧಿ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಪಾಲಿಗೆ ಸಂಜೀವಿನಿಯಾಗಿ ಕಾರ್ಯ ನಿರ್ವಹಿಸಬೇಕಾಗಿದ್ದ ಜೆನರಿಕ್ ಯಾವುದೇ ಕಾರಣವನ್ನು ನೀಡದೆ ಬಂದ್ ಆಗಿದೆ. ಕೊರೊನಾ ಭೀತಿಯಿಂದಾಗಿ ಜೆನರಿಕ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲಸಕ್ಕೆ ಬರುತ್ತಿಲ್ಲ,ಹೀಗಾಗಿ ಮಳಿಗೆಯನ್ನು ಬಂದ್ ಮಾಡಲಾಗಿದೆ ಎಂದು ಆಸ್ಪತ್ರೆಯ ಆವರಣದಲ್ಲಿದ್ದ ರೋಗಿಯ ಸಂಬಂಧಿಯೊಬ್ಬರು ದೂರಿದರು.

ಇನ್ನು ಪ್ರಧಾನಮಂತ್ರಿ ಭಾರತೀಯಜನಔಷಧಿ ಕೇಂದ್ರದ ಮಳಿಗೆಗಳು ಸಹ ಸಾರ್ವಜನಿಕರಿಗೆ ಸ್ಪಂದಿಸುತ್ತಿಲ್ಲ ,ಮಂಡ್ಯ ನಗರದಲ್ಲಿ ಸುಮಾರು ೬ ಜನಔಷಧಿ ಕೇಂದ್ರಗಳಿವೆ,ಈ ಪೈಕಿ ಗುತ್ತಲು,ಕಲ್ಲಹಳ್ಳಿ,ಕಾರಸವಾಡಿ ರಸ್ತೆಯಲ್ಲಿರುವ ಮಳಿಗೆಗಳು ಬಂದ್ ಆಗಿದ್ದು ಹೊಳಲು ವೃತ್ತ, ಮೂರನೇ ಮುಖ್ಯ ರಸ್ತೆಯಲ್ಲಿರುವ ಕೇಂದ್ರಗಳು ಮಾತ್ರ ಬಾಗಿಲು ತೆರೆದು ರೋಗಿಗಳಿಗೆ ರಿಯಾಯಿತಿ ದರದಲ್ಲಿ ಔಷಧಿ ಪೂರೈಸುತ್ತಿವೆ

ರೈತರ ಸೊಸೈಟಿ ಕಟ್ಟಡದಲ್ಲಿರುವ ಜನ ಔಷಧಿ ಕೇಂದ್ರ ಸಮಯ ನಿಗದಿ ಮಾಡಿಕೊಂಡಿದ್ದು ಬೆಳಿಗ್ಗೆ 7.15 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ಈ ಮಳಿಗೆಯಲ್ಲಿ ಔಷಧಿ ಪಡೆಯಲು ನಗರ ಹಾಗೂ ಗ್ರಾಮೀಣ ಪ್ರದೇಶದ ನೂರಾರು ಮಂದಿ ಸಾರ್ವಜನಿಕರು ಪ್ರತಿನಿತ್ಯವೂ ಬರುತ್ತಿದ್ದು ಸಮಯ ನಿಗದಿಯ ಬಗ್ಗೆ ಗೊತ್ತಿಲ್ಲದೆ ವಾಪಸ್ಸಾಗುತ್ತಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಸಯಮ ನಿಗಧಿ ಮಾಡಲಾಗಿದೆ ಎಂದು ಫಲಕದಲ್ಲಿ ಪ್ರಕಟಿಸಲಾಗಿದ್ದು ಶೇ.೩೦ ರಿಂದ ೭೦ ರಷ್ಟು ರಿಯಾಯಿತಿ ದರದಲ್ಲಿ ಔಷಧಿ ಮಾರುವ  ಈ ಕೇಂದ್ರ ಈ ರೀತಿ ಸಮಯ ನಿಗದಿ ಮಾಡಿರುವುದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಒಟ್ಟಾರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ತೆರೆಯಲ್ಪಟ್ಟಿರುವ ಔಷಧಿ ಮಳಿಗೆಗಳು ಸಾರ್ವಜನಿಕರ ಹಿತ ಕಾಪಾಡದೆ ಬಾಗಿಲು ಮುಚ್ಚಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ,ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಇಲಾಖೆವತಿಯಿಂದ  ತೆರೆಯಲಾಗಿರುವ ಈ ಜನ ಔಷಧಿ ಕೇಂದ್ರ ಹಾಗೂ ಜೆನರಿಕ್ ಔಷಧಿ ಮಳಿಗೆಗಳು ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಿ ರೋಗಿಗಳು ಮತ್ತು ಸಾರ್ವಜನಿಕರ ಹಿತಕಾಪಾಡಲು ಸಂಬಂಧಪಟ್ಟ ಇಲಾಖಾಧಿಕಾರಿಗಳು ಮುಂದಾಗಬೇಕೆಂದು  ಸಾರ್ವಜನಿಕರು ಒತ್ತಾಯಿಸಿದ್ದಾರೆ

ವರದಿ: ನಾಗಯ್ಯ 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT