ಚಂದ್ರಕಾಂತ ಕುಸನೂರ 
ರಾಜ್ಯ

ಹಿರಿಯ ಸಾಹಿತಿ ಚಂದ್ರಕಾಂತ ಕುಸನೂರ ನಿಧನ

ಕನ್ನಡದ ಖ್ಯಾತ ಸಾಹಿತಿ ಚಂದ್ರಕಾಂತ ಕುಸನೂರ ಅವರು ಕಳೆದ ರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.

ಬೆಂಗಳೂರು:ಕನ್ನಡದ ಖ್ಯಾತ ಸಾಹಿತಿ ಚಂದ್ರಕಾಂತ ಕುಸನೂರ ಅವರು ಕಳೆದ ರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.

ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿಗಳು ಹಾಗು ರಂಗಕರ್ಮಿಗಳು.ಇವರು 1931ರಲ್ಲಿ ಕಲಬುರಗಿಯ ಕುಸನೂರಲ್ಲಿ ಜನಿಸಿದರು. ಎಂ.ಎ, ಬಿ.ಇಡಿ ಪದವಿಗಳನ್ನು ಪಡೆದಿದ್ದಾರೆ.ಕಲಬುರ್ಗಿ ಹಿಂದಿ ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು.ಕಲಬುರಗಿಯಲ್ಲಿ "ರಂಗ ಮಾಧ್ಯಮ"ಎಂಬ ನಾಟಕ ಸಂಸ್ಥೆಯ ಸ್ಥಾಪಕರಾಗಿದ್ದರು. ಕನ್ನಡದಲ್ಲಿ ಅಬ್ಬರ್ಡ್ ಮಾದರಿ ನಾಟಕಗಳನ್ನು ರಚಿಸಿದರು.

1975ರಲ್ಲಿ “ಯಾತನಾ ಶಿಬಿರ” ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಲಭಿಸಿದೆ.1992 ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿ ನೀಡಲಾಗಿದೆ.2006ನೆಯ ಸಾಲಿನ ನಾಡೋಜ ಪ್ರತಿಷ್ಠಾನದ ಅರವಿಂದ ಪ್ರಶಸ್ತಿ ದೊರೆತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT