ವಿ. ಸೋಮಣ್ಣ 
ರಾಜ್ಯ

ಜನಪ್ರತಿನಿಧಿಗಳೇ ಹೀಗಾದ್ರೆ ಹೇಗೆ?: ಸಾಮಾಜಿಕ ಅಂತರ ನಿಯಮ ಗಾಳಿಗೆ ತೂರಿದ ಸಚಿವ ಸೋಮಣ್ಣ!

ರಾಮನಗರ ಎಪಿಎಂಸಿ ಮಾರುಕಟ್ಟೆಯಲ್ಲಿ ಎಸ್ ಟಿ ಸೋಮಶೇಖರ್ ಮಾಡಿದ ತಪ್ಪನ್ನೇ ಬೆಂಗಳೂರಿನಲ್ಲಿ ವಿ ಸೋಮಣ್ಣ ಪುನಾರಾವರ್ತಿಸಿದ್ದಾರೆ. ಮೂಡಲ ಪಾಳ್ಯದಲ್ಲಿ ಕೆಮಿಕಲ್ ಟನಲ್ ಉದ್ಘಾಟನೆಯ ವೇಳೆ ವಸತಿ ಸಚಿವ ವಿ.ಸೋಮಣ್ಣ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದ್ದಾರೆ.

ಬೆಂಗಳೂರು:  ರಾಮನಗರ ಎಪಿಎಂಸಿ ಮಾರುಕಟ್ಟೆಯಲ್ಲಿ ಎಸ್ ಟಿ ಸೋಮಶೇಖರ್ ಮಾಡಿದ ತಪ್ಪನ್ನೇ ಬೆಂಗಳೂರಿನಲ್ಲಿ ವಿ ಸೋಮಣ್ಣ ಪುನಾರಾವರ್ತಿಸಿದ್ದಾರೆ. ಮೂಡಲ ಪಾಳ್ಯದಲ್ಲಿ ಕೆಮಿಕಲ್ ಟನಲ್ ಉದ್ಘಾಟನೆಯ ವೇಳೆ ವಸತಿ ಸಚಿವ ವಿ.ಸೋಮಣ್ಣ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದ್ದಾರೆ.

ಬೆಂಗಳೂರಿನ ಮೂಡಲಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ವಸತಿ ಸಚಿವ ವಿ.ಸೋಮಣ್ಣ ಕೆಮಿಕಲ್ ಟನಲ್ ಉದ್ಘಾಟನೆ ಮಾಡಿದ್ದಾರೆ. ಆ ವೇಳೆ ಆಗಮಿಸಿದ ಜನರು ಗುಂಪು ಸೇರಿದ್ದರು. ಒಬ್ಬ ಜವಾಬ್ದಾರಿಯುತ ಸಚಿವರಾಗಿದ್ದರೂ ವಿ.ಸೋಮಣ್ಣ ಜನ ಗುಂಪಾಗಿ ಸೇರಿದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸದೆ ಸುಮ್ಮನೆ ನಿಂತಿದ್ದರು ಎಂದು ಆರೋಪ ಕೇಳಿಬಂದಿದೆ.

ಯಡಿಯೂರಪ್ಪ ಸಂಪುಟದ ಹಿರಿಯ ಸಚಿವರಾಗಿರುವ ಸೋಮಣ್ಣ ಮಾಸ್ಕ್ ಧರಿಸಿದ್ದರು, ಆದರೆ ಅವರು ಸುತ್ತ ನೆರೆದಿದ್ದವರು ಮಾಸ್ಕ್ ಧರಿಸಿರಲಿಲ್ಲ ಹಾಗೂ ಸೋಮಣ್ಣ ಅವರನ್ನು  ಸುತ್ತುವರಿದಿದ್ದರು. ಈ ವೇಳೆ ಸೋಮಣ್ಣ ಅವರನ್ನು ದೂರ ಹೋಗುವಂತೆ ಹೇಳಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT