ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಾದ್ಯಂತ ಏಪ್ರಿಲ್ 21ರವರೆಗೂ ಲಾಕ್'ಡೌನ್ ವಿಸ್ತರಣೆ: ರಾಜ್ಯ ಸರ್ಕಾರ

ಲಾಕ್'ಡೌನ್ ವೇಳೆ ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಅವಧಿಯನ್ನು ಎರಡು ದಿನ ವಿಸ್ತರಣೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ,.ವಿಜಯ್ ಭಾಸ್ಕರ್ ಆದೇಶಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಲಾಕ್'ಡೌನ್ ಸಡಿಲಿಕೆಯು ಬುಧವಾರದಿಂದ ಅನ್ವಯವಾಗಲಿದೆ. 

ಬೆಂಗಳೂರು: ಲಾಕ್'ಡೌನ್ ವೇಳೆ ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಅವಧಿಯನ್ನು ಎರಡು ದಿನ ವಿಸ್ತರಣೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ,.ವಿಜಯ್ ಭಾಸ್ಕರ್ ಆದೇಶಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಲಾಕ್'ಡೌನ್ ಸಡಿಲಿಕೆಯು ಬುಧವಾರದಿಂದ ಅನ್ವಯವಾಗಲಿದೆ. 

ಪ್ರಸ್ತುತ ಕೇಂದ್ರ್ದ ಮಾರ್ಗೂಸೂಚಿಗಳ ಪಾಲನೆ ಅವಧಿಯು ಸೋಮವಾರದವರೆಗೆ ಇದ್ದು, ಇದೀಗ ಮಂಗಳವಾರ ಮಧ್ಯರಾತ್ರಿವರೆಗೂ ವಿಸ್ತರಿಸಲಾಗಿದೆ. ಸೋಮವಾರ ಸಚಿವ ಸಂಪುಟ ಸಭೆ ಇದ್ದು, ಈ ವೇಳೆ ಕೆಲವು ತೀರ್ಮಾನ ಕೈಗೊಂಡು ಮಾರ್ಗಸೂಚಿಗಳ ಆದೇಶ ಹೊರಡಿಸಬೇಕು. ಇದಕ್ಕೆ ಒಂದು ದಿನ ಕಾಲಾವಕಾಶ ಅಗತ್ಯ ಇರುವ ಕಾರಣ, ಸೋಮವಾರದವರೆಗೆ ಇದ್ದ ಪಾಲನೆ ಅವಧಿಯನ್ನು ಒಂದು  ದಿನಕ್ಕೆ ವಿಸ್ತರಣೆ ಮಾಡಲಾಗಿದೆ. 

ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಸರ್ಕಾರದ ಎಲ್ಲಾ ಇಲಾಖೆಗಳು ಕೇಂದ್ರದ ಮಾರ್ಗಸೂಚಿಗಳನ್ನು ಮಂಗಳವಾರದವರೆಗೆ ಪಾಲನೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. 

ಮಂಗಳವಾರದವರೆಗೆ ಕೇಂದ್ರದ ಮಾರ್ಗಸೂಚಿಗಳು ಅನ್ವಯವಾಗುವುದರಿಂದ ಬುಧವಾರದಿಂದ ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಕೈಗೊಳ್ಳುವ ನಿರ್ಣಯಗಳು ಜಾರಿಯಾಗಲಿವೆ. ಸರ್ಕಾರವು ಈಗಾಗಲೇ ಲಾಕ್'ಡೌನ್ ನಿಯಮಗಳನ್ನು ಸಡಿಲಿಕೆ ಮಾಡಲು ತೀರ್ಮಾನಿಸಿದೆ. ಆರ್ಥಿಕ ಚಟುವಟಿಕೆ ಪ್ರಾರಂಭ ಮಾಡುವ ದೃಷ್ಟಿಯಿಂದ ಸಡಿಲಿಕೆ ಮಾಡಲು ಮುಂದಾಗಿದೆ. ಮಂಗಳವಾರದವರೆಗೆ ಕೇಂದ್ರದ ಮಾರ್ಗಸೂಚಿಗಳು ಜಾರಿಯಲ್ಲಿರುವ ಕಾರಣ ಬುಧವಾರದಿಂದ ರಾಜ್ಯದ ಮಾರ್ಗಸೂಚಿಗಳು ಕಾರ್ಯರೂಪಕ್ಕೆ ಬರಲಿವೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ