ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಾದ್ಯಂತ ಏಪ್ರಿಲ್ 21ರವರೆಗೂ ಲಾಕ್'ಡೌನ್ ವಿಸ್ತರಣೆ: ರಾಜ್ಯ ಸರ್ಕಾರ

ಲಾಕ್'ಡೌನ್ ವೇಳೆ ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಅವಧಿಯನ್ನು ಎರಡು ದಿನ ವಿಸ್ತರಣೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ,.ವಿಜಯ್ ಭಾಸ್ಕರ್ ಆದೇಶಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಲಾಕ್'ಡೌನ್ ಸಡಿಲಿಕೆಯು ಬುಧವಾರದಿಂದ ಅನ್ವಯವಾಗಲಿದೆ. 

ಬೆಂಗಳೂರು: ಲಾಕ್'ಡೌನ್ ವೇಳೆ ಕೇಂದ್ರ ಗೃಹ ಇಲಾಖೆಯ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಅವಧಿಯನ್ನು ಎರಡು ದಿನ ವಿಸ್ತರಣೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ,.ವಿಜಯ್ ಭಾಸ್ಕರ್ ಆದೇಶಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಲಾಕ್'ಡೌನ್ ಸಡಿಲಿಕೆಯು ಬುಧವಾರದಿಂದ ಅನ್ವಯವಾಗಲಿದೆ. 

ಪ್ರಸ್ತುತ ಕೇಂದ್ರ್ದ ಮಾರ್ಗೂಸೂಚಿಗಳ ಪಾಲನೆ ಅವಧಿಯು ಸೋಮವಾರದವರೆಗೆ ಇದ್ದು, ಇದೀಗ ಮಂಗಳವಾರ ಮಧ್ಯರಾತ್ರಿವರೆಗೂ ವಿಸ್ತರಿಸಲಾಗಿದೆ. ಸೋಮವಾರ ಸಚಿವ ಸಂಪುಟ ಸಭೆ ಇದ್ದು, ಈ ವೇಳೆ ಕೆಲವು ತೀರ್ಮಾನ ಕೈಗೊಂಡು ಮಾರ್ಗಸೂಚಿಗಳ ಆದೇಶ ಹೊರಡಿಸಬೇಕು. ಇದಕ್ಕೆ ಒಂದು ದಿನ ಕಾಲಾವಕಾಶ ಅಗತ್ಯ ಇರುವ ಕಾರಣ, ಸೋಮವಾರದವರೆಗೆ ಇದ್ದ ಪಾಲನೆ ಅವಧಿಯನ್ನು ಒಂದು  ದಿನಕ್ಕೆ ವಿಸ್ತರಣೆ ಮಾಡಲಾಗಿದೆ. 

ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಸರ್ಕಾರದ ಎಲ್ಲಾ ಇಲಾಖೆಗಳು ಕೇಂದ್ರದ ಮಾರ್ಗಸೂಚಿಗಳನ್ನು ಮಂಗಳವಾರದವರೆಗೆ ಪಾಲನೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ. 

ಮಂಗಳವಾರದವರೆಗೆ ಕೇಂದ್ರದ ಮಾರ್ಗಸೂಚಿಗಳು ಅನ್ವಯವಾಗುವುದರಿಂದ ಬುಧವಾರದಿಂದ ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಕೈಗೊಳ್ಳುವ ನಿರ್ಣಯಗಳು ಜಾರಿಯಾಗಲಿವೆ. ಸರ್ಕಾರವು ಈಗಾಗಲೇ ಲಾಕ್'ಡೌನ್ ನಿಯಮಗಳನ್ನು ಸಡಿಲಿಕೆ ಮಾಡಲು ತೀರ್ಮಾನಿಸಿದೆ. ಆರ್ಥಿಕ ಚಟುವಟಿಕೆ ಪ್ರಾರಂಭ ಮಾಡುವ ದೃಷ್ಟಿಯಿಂದ ಸಡಿಲಿಕೆ ಮಾಡಲು ಮುಂದಾಗಿದೆ. ಮಂಗಳವಾರದವರೆಗೆ ಕೇಂದ್ರದ ಮಾರ್ಗಸೂಚಿಗಳು ಜಾರಿಯಲ್ಲಿರುವ ಕಾರಣ ಬುಧವಾರದಿಂದ ರಾಜ್ಯದ ಮಾರ್ಗಸೂಚಿಗಳು ಕಾರ್ಯರೂಪಕ್ಕೆ ಬರಲಿವೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT