ರಸ್ತೆ ಮೇಲೆ ಎಸೆದಿರುವ ನೋಟುಗಳು 
ರಾಜ್ಯ

ರಸ್ತೆಯಲ್ಲಿ ನೂರರ ಗರಿಗರಿ ನೋಟು: ಕೊರೋನಾ ವೈರಸ್ ಭೀತಿಯಿಂದ ಬೆಚ್ಚಿ ಬಿದ್ದ ಗಂಗಾವತಿ ಜನ

ಗಂಗಾವತಿಯ ಜಯನಗರದ ಮೊದಲ ಹಂತದ ಎರಡನೇ ತಿರುವಿನಲ್ಲಿ ಬೆಳಂಬೆಳಗ್ಗೆ ರಸ್ತೆಯಲ್ಲಿ ನೂರರ ಗರಿಗರಿ ನೋಟುಗಳನ್ನು ಕಂಡು ಜನ ಬೆಚ್ಚಿ ಬಿದ್ದ ಘಟನೆ ನಡೆದಿದೆ.

ಗಂಗಾವತಿ: ಇಲ್ಲಿನ ಜಯನಗರದ ಮೊದಲ ಹಂತದ ಎರಡನೇ ತಿರುವಿನಲ್ಲಿ ಬೆಳಂಬೆಳಗ್ಗೆ ರಸ್ತೆಯಲ್ಲಿ ನೂರರ ಗರಿಗರಿ ನೋಟುಗಳನ್ನು ಕಂಡು ಜನ ಬೆಚ್ಚಿ ಬಿದ್ದ ಘಟನೆ ನಡೆದಿದೆ.

ಹಾಸ್ಯ ಸಾಹಿತಿ ಬೀಚಿ ಬಿ. ಪ್ರಾಣೇಶ ಅವರ ನಿವಾಸ ಸಮೀಪ ಇರುವ ಉದ್ಯಮಿ ಗುಪ್ತ ಎಂಬುವವರ ಮನೆ ಸಮೀಪ ಈ ಘಟನೆ  ನಡೆದಿದ್ದು, ಅಪರಿಚಿತರು ನೂರು ರೂಪಾಯಿ ಮುಖ ಬೆಲೆಯ ಒಟ್ಟು ಐದು ನೋಟುಗಳನ್ನು ಎಸೆದು ಹೋಗಿದ್ದಾರೆ.

ನೂರರ ನೋಟು ಕಂಡ ಜನ ಭಯಭೀತರಾಗಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ನಗರ ಠಾಣೆಯ ಪಿಎಸ್ಐ ವೆಂಕಟಸ್ವಾಮಿ ಪರಿಶೀಲನೆ ನಡೆಸಿದರು.

ಕೊರೋನಾದಂತ ವಿಪತ್ತಿನ ಸಂದರ್ಭದಲ್ಲಿ ಅಪರಿಚಿತರ ಇಂತಹ ಕೃತ್ಯಗಳಿಂದ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಪೊಲೀಸರು ನೋಟುಗಳನ್ನು ಪರಿಶೀಲಿಸಿ ವಶಕ್ಕೆ ಪಡೆದುಕೊಂಡರು.

ವರದಿ: ಶ್ರೀನಿವಾಸ .ಎಂ.ಜೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z NEET ಪ್ರತಿಭಟನೆ; ಕಲ್ಲು ತೂರಾಟ, BDO Ritesh ತಲೆಬುರುಡೆಗೆ ತೀವ್ರ ಗಾಯ!

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಚಿನ್ನದ ಪದಕ ಗೆದ್ದ ಮೀರಾಬಾಯಿ ಚಾನು, ಭಾರತಕ್ಕೆ ಮೊದಲ ಚಿನ್ನ ಪದಕ!

PoK ಮರಳಿ ಪಡೆಯುವುದೇ ಭಾರತ-ಪಾಕ್ ನಡುವೆ ಬಾಕಿ ಇರುವ ಏಕೈಕ ಸಮಸ್ಯೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್