ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ವೈರಸ್ ಲಾಕ್ ಡೌನ್: ಗರ್ಭಿಣಿ ಮಗಳನ್ನು ನೋಡಲು ಪೊಲೀಸರ ಕಣ್ತಪ್ಪಿಸಿ ಹೋಗಿದ್ದ ತಂದೆ ಜಲ ಸಮಾಧಿ

ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಆಸ್ಪತ್ರೆಗೆ ದಾಖಲಿಸಿದ್ದ ಗರ್ಭಿಣಿ ಮಗಳನ್ನು ನೋಡಲು ಹೋದ ತಂದೆ ಜಲ ಸಮಾಧಿಯಾಗಿರುವ ಹೃದಯವಿದ್ರಾವಕ ಘಟನೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ನಡೆದಿದೆ.

ಚಾಮರಾಜನಗರ:‌ ಆಸ್ಪತ್ರೆಗೆ ದಾಖಲಿಸಿದ ಗರ್ಭಿಣಿ ಮಗಳನ್ನು ನೋಡಲು ಹೋದ ತಂದೆ ಜಲ ಸಮಾಧಿಯಾಗಿರುವ ಹೃದಯವಿದ್ರಾವಕ ಘಟನೆ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ನಡೆದಿದೆ.

ಪೆರುಮಾಳ್ (60 ವರ್ಷ) ಮೃತ ವ್ಯಕ್ತಿ. ತಮಿಳುನಾಡಿನ ಈರೋಡ್ ಜಿಲ್ಲೆಯ ಪಳ್ಳಿಪಾಲ್ಯದಲ್ಲಿ ವಾಸವಿದ್ದ ಪೆರುಮಾಳ್, ತನ್ನ ಮಗಳು ಸುಮತಿಯನ್ನು ಹನೂರು ತಾಲೂಕಿನ‌ ಗೋಪಿನಾಥಂ ಸಮೀಪದ ಪುದೂರು ಗ್ರಾಮಕ್ಕೆ ಮದುವೆ ಮಾಡಿಕೊಟ್ಟಿದ್ದರು. ಮಗಳು ಗರ್ಭಿಣಿಯಾಗಿದ್ದು, ಶನಿವಾರ  ಮೆಟ್ಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಗಳನ್ನು ಕಾಣಬೇಕೆಂಬ ಹಂಬಲದಿಂದ ಚೆಕ್ ಪೋಸ್ಟ್ ಪೊಲೀಸರ ಕಣ್ತಪ್ಪಿಸಿ ಮೆಟ್ಟೂರನ್ನು ತಲುಪಲು ಪಾಲಾರ್ ಹಳ್ಳಕ್ಕೆ ಇಳಿದ ವೇಳೆ ಮಾರ್ಗ ಮಧ್ಯೆ ಈಜಲಾಗದೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೈಸೂರು- ಮೆಟ್ಟೂರು ಮುಖ್ಯ ರಸ್ತೆಯ 200 ಮೀ.ನಲ್ಲೇ ಹಳ್ಳ  ಹರಿಯುತ್ತಿದ್ದು, ಒಂದು ಗಂಟೆ ಈಜಿದರೆ ತಮಿಳುನಾಡಿನ ಕಾರೇಕಾಡು ಸಿಗಲಿದೆ. ಕಾರೇಕಾಡಿನ‌ ಮೂಲಕ ಪರಿಚಯಸ್ಥರ ಬೈಕ್ ಹಿಡಿದು ಮೆಟ್ಟೂರು ತಲುಪಿ ಮಗಳ ನೋಡಬೇಕೆಂಬ ಹಂಬಲವೇ ತಂದೆಗೆ ಮುಳುವಾಗಿದೆ. ಇಂದು ಸಂಜೆ ತಮಿಳುನಾಡಿನ ಬರಗೂರು ಠಾಣಾ ವ್ಯಾಪ್ತಿಯಲ್ಲಿ  ಮೃತದೇಹ ಸಿಕ್ಕಿದ್ದು, ಪ್ರಕರಣ ದಾಖಲಾಗಿದೆ.

ವರದಿ: ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT