ಜಮೀರ್ ಅಹ್ಮದ್ ಖಾನ್ 
ರಾಜ್ಯ

ಪಾದರಾಯನಪುರ ಘಟನೆಯಿಂದ ನನ್ನ ಹೆಸರಿಗೆ ಮಸಿ ಬಳಿಯಲು ಯತ್ನಿಸಿದರೆ ನಾನು ವಿಚಲಿತನಾಗುವುದಿಲ್ಲ: ಜಮೀರ್ ಅಹ್ಮದ್

ಪಾದರಾಯನಪುರದಲ್ಲಿ ಕಳೆದ ಭಾನುವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಮಂಗಳವಾರ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಪಾದರಾಯನಪುರದಲ್ಲಿ ಕಳೆದ ಭಾನುವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಮಂಗಳವಾರ ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದಾರೆ.

 ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ಕೂಡ ನಂಬಲು ಸಾಧ್ಯವಾಗುತ್ತಿಲ್ಲ, ತಮ್ಮನ್ನೇ ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ಟ್ವೀಟ್ ಮಾಡಿರುವ ಅವರು, ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ, ಹೇಳುವುದು ಇಲ್ಲ. ನನ್ನ ಕ್ಷೇತ್ರವೂ ಇತರ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟು ನೋವಾಗಿದೆ ಎಂದು ಹೇಳಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಬರಬೇಕೆಂದು ಲಾಕ್‌ಡೌನ್ ಪ್ರಾರಂಭವಾದ ದಿನದಿಂದ ಹಗಲು ರಾತ್ರಿಯೆನ್ನದೆ ನಾನು ಕ್ಷೇತ್ರದಲ್ಲಿದ್ದು, ಅಧಿಕಾರಿಗಳಿಗೆ ಸ್ಪಂದಿಸಿ, ಜನರು ಮತ್ತು ಸರ್ಕಾರದ ನಡುವಿನ ಕೊಂಡಿಯಾಗಿ ನಿಂತು ಯಾವುದೇ ರೀತಿಯ ಗೊಂದಲ ಆಗದಂತೆ ಕೆಲಸ ಮಾಡುತ್ತಿದ್ದೇನೆ. ಮೊನ್ನೆಯ ಘಟನೆ ನಡೆಯಬಾರದಿತ್ತು, ನಡೆದಿದೆ. ಅದಕ್ಕೆ ನನ್ನ ವಿಷಾದವಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ‌ಕೈಗೊಳ್ಳಲಿ. ಮುಂದೆ ಇಂತಹ ಘಟನೆಗಳು ನನ್ನ ಕ್ಷೇತ್ರ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ನಡೆಯದಂತೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಹೇಳಿದ್ದಾರೆ.

 ಮಾಧ್ಯಮದ ಸ್ನೇಹಿತರು ಎಲ್ಲರೂ ಒಟ್ಟಾಗಿ ನನ್ನ ಮೇಲೆ ಮುಗಿಬಿದ್ದಿದ್ದರಿಂದ ಅನಿವಾರ್ಯವಾಗಿ ಉತ್ತರಿಸದೆ ಹೊರನಡೆಯಬೇಕಾಯಿತು. ಘಟನೆಯ ಬಗ್ಗೆ ಮಾಧ್ಯಮ ಮಿತ್ರರಿಗಿದ್ದ ಆಕ್ರೋಶ, ನೋವಿನ ಅರಿವು ನನಗಿದೆ. ಇಂತಹ ಒಂದು ದುರ್ಘಟನೆ ನಡೆದ ನಂತರ ಈ ರೀತಿ ಆಕ್ರೋಶಭರಿತ ಮಾತುಗಳು ಬರುವುದು ಸಹಜ. ನನ್ನ ಜನ ಈ ರೀತಿ ವರ್ತಿಸುತ್ತಾರೆ ಎಂದು ನಾನು ಎಂದು ಭಾವಿಸಿರಲಿಲ್ಲ. ಯಾರೋ‌ ಒಂದಷ್ಟು ಜನರ ದುರ್ವರ್ತನೆಗೆ ಇಡೀ ಸಮುದಾಯವನ್ನು ದೂರುವುದು ಕೂಡ ಸರಿಯಲ್ಲ. ಧರ್ಮಾತೀತವಾಗಿ ಕೊರೊನಾ ವಿರುದ್ಧ ದೇಶ ಹೋರಾಡುತ್ತಿದೆ, ಇದು ಒಂದಾಗಬೇಕಾದ ಸಮಯವೇ ಹೊರತು ಸಮಾಜ ಒಡೆಯುವ ಸಮಯವಲ್ಲ ಎಂದು ಹೇಳಿದ್ದಾರೆ.

ನಾನು ಏನು ಹೇಳಲು ಬಯಸಿದ್ದೆ ಅದನ್ನು ಹೇಳಲು ಎಲ್ಲಿಯೂ ನನಗೆ ಅವಕಾಶ ಸಿಗಲಿಲ್ಲ. ಹಿಂದೂ ಮುಸ್ಲಿಂ ಇರಲಿ ಎಲ್ಲರೂ ಒಂದಾಗಿ ಬಾಳಬೇಕು, ಎಲ್ಲರೂ ಒಂದೇ ತಾಯಿಯ ಮಕ್ಕಳು. ನಮ್ಮ ದೇಶವನ್ನು, ರಾಜ್ಯವನ್ನು ಕೊರೊನಾದಿಂದ ಕಾಪಾಡಬೇಕು. ಇದಕ್ಕೆ ನನ್ನ ಕ್ಷೇತ್ರದ ಜನರ ಸಂಪೂರ್ಣ ಸಹಕಾರ ದೊರೆಯಲಿದೆ. ಈ ಘಟನೆ ಸಂಭವಿಸದಂತೆ ಕೈಗೊಳ್ಳಬಹುದಾಗಿದ್ದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಾನು ಆಡಿದ ಮಾತುಗಳಿಗೆ ಬೇರೆಯದೇ ಅರ್ಥ ನೀಡಿ ಕೆಲ ಸಚಿವರು ನನ್ನ ವಿರುದ್ಧ ಏನೇನು ಪದಗಳನ್ನು ಬಳಸಬಹುದೋ ಅವೆಲ್ಲವನ್ನೂ ಬಳಸಿ ನನ್ನನ್ನು ಹಾಡಿ ಹೊಗಳಿದ್ದಾರೆ, ಸಂತೋಷವಾಗಿದೆ. ಅವರಿಗೂ ಧನ್ಯವಾದ. ಆ ಒಂದು ಘಟನೆಯಿಂದ ನನ್ನ ಹೆಸರಿಗೆ ಮಸಿ ಬಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಜನಸೇವೆಯಿಂದ ಹಿಂದೆ ಸರಿಯುವವನಲ್ಲ. ಮಾನವೀಯತೆಯೇ ನನ್ನ ಧರ್ಮ. ಹಣ, ಅಧಿಕಾರ ಯಾವುದೂ ಶಾಶ್ವತವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ನನ್ನ ಸಹೋದರ, ಸಹೋದರಿಯರಿದ್ದಂತೆ. ಇವರೆಲ್ಲರ ಜೊತೆ ಸದಾ ಇರುತ್ತೇನೆ ಎಂದು ಹೇಳಿದ್ದಾರೆ.

ಮುಂದೆ ಇಂಥ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತದೆ. ನನ್ನ ಕ್ಷೇತ್ರದ ಜನತೆ ಎಂದಿನಂತೆ ಮುಂದೆಯೂ ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಾರೆ ಎಂಬ ಭರವಸೆ ನನಗಿದೆ. ನಮ್ಮೆಲ್ಲರ ಗುರಿ ಕೊರೊನಾ ನಿರ್ಮೂಲನೆಯೊಂದೇ ಆಗಿರಲಿ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT