ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಸಾವು, 7 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆ

ರಾಜ್ಯದಲ್ಲಿಂದು ಮಧ್ಯಾಹ್ನದವರೆಗೆ ಏಳು ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಒಟ್ತಾರೆ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದ್ದು ಇದುವರೆಗೆ 17ಮಂದಿ ಮೃತಪಟ್ಟಿದ್ದಾರೆ.

ಬೆಂಗಳುರು: ರಾಜ್ಯದಲ್ಲಿಂದು ಮಧ್ಯಾಹ್ನದವರೆಗೆ ಏಳು ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಒಟ್ತಾರೆ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದ್ದು ಇದುವರೆಗೆ 17ಮಂದಿ ಮೃತಪಟ್ಟಿದ್ದಾರೆ.

ಹೊಸದಾಗಿ ಗುರುತಿಸಲಾಗಿರುವ ಪ್ರಕರಣದಲ್ಲಿ ದಕ್ಷಿಣ ಕನ್ನಡದಲ್ಲಿ ಒಂದು, ವಿಜಯಪುರದಿಂದ ಮೂರು, ಕಲಬುರಗಿಯಿಂದ ಮೂರು ಪ್ರಕರಣಗಳಿದೆ.

ಕಲಬುರಗಿಯ 80 ವರ್ಷದ ವೃದ್ದ ಇಂದು ಬೆಳಿಗ್ಗೆ ಮೃತಪಟ್ಟಿದ್ದು ಇದಲ್ಲದೆ 61 ವರ್ಷ ಹಾಗೂ 29 ವರ್ಷದ ಇಬ್ಬರು ಪುರುಷರಿಗೆ ಕೊರೋನಾ ದೃಢಪಟ್ಟಿದೆ.

ವಿಜಯಪುರದಲ್ಲಿ 18 ವರ್ಷದ ಇಬ್ಬರು ಯುವತಿಯರು ಹಾಗೂ 30 ವರ್ಷದ ಮಹಿಳೆಗೆ ಕೊರೋನಾವೈರಸ್ ಸೋಂಕು ತಗುಲಿದೆ.

ದಕ್ಷಿಣ ಕನ್ನಡ ಬಂಟ್ವಾಳದ 67 ವರ್ಷದ ಮಹಿಳೆಗೆ ಮಹಾಮಾರಿ ಕೊರೋನಾ ಇರುವುದು ದೃಢವಾಗಿದೆ. ಇದುವರೆಗೆ  114 ಜನರು ಗುಣಮುಖರಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT