ಕಾಪು: ಉಚ್ಚಿಲ ಸಮೀಪ ಭೀಕರ ರಸ್ತೆ ಅಪಘಾತ, ಲಾರಿ ಚಾಲಕ ಸ್ಥಳದಲ್ಲೇ ಮೃತ್ಯು 
ರಾಜ್ಯ

ಕಾಪು: ಉಚ್ಚಿಲ ಸಮೀಪ ಭೀಕರ ರಸ್ತೆ ಅಪಘಾತ, ಲಾರಿ ಚಾಲಕ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾಪುವಿನ ಸಮೀಪ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲದ ರಾಷ್ಟ್ರೀಯ ಹ್ಯೆದ್ದಾರಿ-66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಲಾರಿ ಮತ್ತೊಂದು ಲಾರಿಗೆಢಿಕ್ಕಿಯಾಗಿದೆ.

ಕಾಪು: ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾಪುವಿನ ಸಮೀಪ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲದ ರಾಷ್ಟ್ರೀಯ ಹ್ಯೆದ್ದಾರಿ-66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಲಾರಿ ಮತ್ತೊಂದು ಲಾರಿಗೆಢಿಕ್ಕಿಯಾಗಿದೆ.

ಉಡುಪಿ-ಮಂಗಳುರು ರಸ್ತೆಯಲ್ಲಿ ಮೈದಾಹಿಟ್ಟು ಸಾಗಿಸುತ್ತಿದ್ದ ಲಾರಿ ಕೆಟ್ಟು ನಿಂತಿದ್ದು ಇದಕ್ಕೆ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಹಿಂದಿನಿಂದ ಬಂದು ಢಿಕ್ಕಿಯಾಗಿದೆ. ಈ ವೇಳೆ ಲಾರಿ ರಿಪೇರಿ ಮಾಡುತ್ತಿದ್ದ ಹುಬ್ಬಳ್ಳಿ ಮೂಲದ ಚಾಲಕ ಮಹಂತೇಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ಇನ್ನೊಂದು ಲಾರಿ ಚಾಲಕ ಸಹ ಗಾಯಗೊಂಡಿದ್ದಾಗಿ ಪೋಲೀಸ್ ಮೂಲಗಳು ಹೇಳಿದೆ.

ಅಪಘಾತದ ತೀವ್ರತೆಗೆ ಕೆಟ್ಟು ನಿಂತ ಲಾರಿ ಡಿವೈಡರ್ ದಾಟಿ ರಸ್ತೆಯ ಇನ್ನೊಂದು ಬದಿಗೆ ಉರುಳಿದೆ. ಢಿಕ್ಕಿ ಹೊಡೆದಲಾರಿ ಸಹ ಪಲ್ಟಿಯಾಗಿದೆ. ಮಂಗಳವಾರ  ಮುಂಜಾನೆ 4 ಗಂಟೆಗೆ ಈ ಅವಘಡ ಸಂಭವಿಸಿದ್ದು ಘಟನೆ ಕುರಿತಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT