ಪ್ರತ್ಯಕ್ಷ ದೃಶ್ಯ 
ರಾಜ್ಯ

ನಾಗಮಂಗಲ: ಲಾಕ್ ಡೌನ್ ನಡುವೆ ಕಾರ್‌ನಲ್ಲಿ ಅಕ್ರಮ ಮದ್ಯ ಸಾಗಾಟ, ಮೂವರ ಬಂಧನ

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದಿರುವ ನಾಗಮಂಗಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ನಾಗಮಂಗಲ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದಿರುವ ನಾಗಮಂಗಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ಮಾಕಳ್ಳಿ ಗ್ರಾಮದ ಹರೀಶ್ ಗೌಡ, ಸಂದೀಪ್, ದಾವಣಗೆರೆಯ ಕ್ಯಾಶಿನಕೆರೆಯ ಸೋಮಶೇಖರ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಇಂದು ಸಂಜೆ 4.45 ರ ಸಮಯದಲ್ಲಿ ನಾಗಮಂಗಲ ಟೌನ್ ಜೆವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ಪಿ.ಎಸ್.ಐ ರವಿಕಿರಣ್ ಮತ್ತು ಸಿಬ್ಬಂದಿ ವಾಹನ ತಪಾಸಣೆ ನಡೆಸಿದ ವೇಳೆ ಬೆಳ್ಳೂರು ಕಡೆಯಿಂದ ಬರುತ್ತಿದ್ದ ಸ್ವಿಪ್ಟ್ ಕಾರ್(ಕೆಎ;53 ಎಂಬಿ.6899)ನ್ನು ತಪಾಸಣೆ ನಡೆಸಿದಾಗ 5 ಬಾಕ್ಸ್ ನಲ್ಲಿದ್ದ ಸುಮಾರು 60 ಬಾಟಲ್ ಬಿಯರ್ ಪತ್ತೆಯಾಗಿದೆ.

ತಕ್ಷಣವೇ ಈ ಮೂವರನ್ನು ಬಂಧಿಸಿದ  ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

ಜೈಪುರ ಮಹಿಳೆ ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ತಾಯಿಗೂ ಮೊದಲೇ ತಂದೆಯನ್ನೂ ಕೊಂದಿದ್ದಳೇ ಹಂತಕ ಪುತ್ರಿ? ಸೋದರಮಾವ ಹೇಳಿದ್ದೇನು?