ಪಾಲಿಕೆಗೆ ಫೋನ್ ಮಾಡಿದರೆ ಮನೆ ಬಾಗಿಲಿಗೇ ಬರಲಿದೆ ಅಗತ್ಯ ವಸ್ತುಗಳು! 
ರಾಜ್ಯ

ಪಾಲಿಕೆಗೆ ಫೋನ್ ಮಾಡಿದರೆ ಮನೆ ಬಾಗಿಲಿಗೇ ಬರಲಿದೆ ಅಗತ್ಯ ವಸ್ತುಗಳು!

ಲಾಕ್'ಡೌನ್ ನಿಂದಾಗಿ ಅಗತ್ಯ ವಸ್ತುಗಳು ಸಿಗದೇ ತೊಂದರೆಯಲ್ಲಿರುವ ನಗರದ ಜನತೆಗೆ ಮನೆಗೆ ವಸ್ತುಗಳನ್ನು ಪೂರೈಸುವ ಸಹಾಯವಾಣಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರಂಭಿಸಿದೆ. 

ದಿನಸಿ, ತರಕಾರಿ, ಔಷಧ ಹೋಮ್ ಡೆಲಿವರಿ: ಸಹಾಯವಾಣಿ 080-61914960 ಕರೆ ಮಾಡಿ ಸೇವೆ ಪಡೆಯಿರಿ


ಬೆಂಗಳೂರು: ಲಾಕ್'ಡೌನ್ ನಿಂದಾಗಿ ಅಗತ್ಯ ವಸ್ತುಗಳು ಸಿಗದೇ ತೊಂದರೆಯಲ್ಲಿರುವ ನಗರದ ಜನತೆಗೆ ಮನೆಗೆ ವಸ್ತುಗಳನ್ನು ಪೂರೈಸುವ ಸಹಾಯವಾಣಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರಂಭಿಸಿದೆ. 

ಜದನರು ಮನೆಯಿಂದಲೇ ಹೋಂ ಡೆಲಿವರಿ ಸಹಾಯವಾಣಿ 080-61914960ಗೆ ಕರೆ ಮಾಡಿದರೆ, ದಿನಸಿ, ತರಕಾರಿ, ಔಷಧಿ ಮುಂತಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸಲಾಗುತ್ತದೆ. ಇದಕ್ಕೆ ಹೆಚ್ಚುವರಿಯಾಗಿ ರೂ.10 ಸೇವಾ ಶಲ್ಕ ಪಡೆಯಲಾಗುತ್ತದೆ. ಖಾಸಗಿ ಏಜೆನ್ಸಿಯ ಸಹಯೋಗದಲ್ಲಿ ಅಗತ್ಯ ವಸ್ತುಗಳನ್ನು ನೀಡಲಾಗುತ್ತದೆ. ಇದಕ್ಕಾಗಿ 5 ಸಾವಿರ ಜನರನ್ನು ಬಳಸಿಕೊಳ್ಲಲಾಗುತ್ತಿದೆ. ಈ ಸೇವೆಯನ್ನು ಒದಗಿಸಲು 18 ಸಾವಿರ ವರ್ತಕರ ಜೊತೆಗೆ ಮಾತುಕತೆ ನಡೆಸಿ ನೋಂದಾಯಿಸಿಕೊಳ್ಳಲಾಗಿದೆ. 

ಪಾಲಿಕ ಆರಂಭಿಸಿರುವ ನೂತನ ಸೇವೆಗೆ ಮುಖ್ಯಂತ್ರಿ ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಚಾಲನೆ  ನೀಡಿದರು. 

ನಗರದ ಜನತೆಗೆ ಅಗತ್ಯ ವಸ್ತುಗಳನ್ನು ತಲುಪಿಸುವ ಉದ್ದೇಶದಿಂದ ಬಿಬಿಎಂಪಿ ಆರಂಭಿಸಿರುವ ಹೋಂ ಡೆಲಿವರಿ ಸಹಾಯವಾಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!

India without Politics: 'ಹನುಮಾನ್ ಅಂಶ್' ನೋಡಲು ಚಪ್ಪಲಿ ಬಿಚ್ಚಿ ಕುಳಿತ ಮುಸ್ಲಿಂ ವ್ಯಕ್ತಿ; video ವೈರಲ್