ಪಾಲಿಕೆಗೆ ಫೋನ್ ಮಾಡಿದರೆ ಮನೆ ಬಾಗಿಲಿಗೇ ಬರಲಿದೆ ಅಗತ್ಯ ವಸ್ತುಗಳು! 
ರಾಜ್ಯ

ಪಾಲಿಕೆಗೆ ಫೋನ್ ಮಾಡಿದರೆ ಮನೆ ಬಾಗಿಲಿಗೇ ಬರಲಿದೆ ಅಗತ್ಯ ವಸ್ತುಗಳು!

ಲಾಕ್'ಡೌನ್ ನಿಂದಾಗಿ ಅಗತ್ಯ ವಸ್ತುಗಳು ಸಿಗದೇ ತೊಂದರೆಯಲ್ಲಿರುವ ನಗರದ ಜನತೆಗೆ ಮನೆಗೆ ವಸ್ತುಗಳನ್ನು ಪೂರೈಸುವ ಸಹಾಯವಾಣಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರಂಭಿಸಿದೆ. 

ದಿನಸಿ, ತರಕಾರಿ, ಔಷಧ ಹೋಮ್ ಡೆಲಿವರಿ: ಸಹಾಯವಾಣಿ 080-61914960 ಕರೆ ಮಾಡಿ ಸೇವೆ ಪಡೆಯಿರಿ


ಬೆಂಗಳೂರು: ಲಾಕ್'ಡೌನ್ ನಿಂದಾಗಿ ಅಗತ್ಯ ವಸ್ತುಗಳು ಸಿಗದೇ ತೊಂದರೆಯಲ್ಲಿರುವ ನಗರದ ಜನತೆಗೆ ಮನೆಗೆ ವಸ್ತುಗಳನ್ನು ಪೂರೈಸುವ ಸಹಾಯವಾಣಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರಂಭಿಸಿದೆ. 

ಜದನರು ಮನೆಯಿಂದಲೇ ಹೋಂ ಡೆಲಿವರಿ ಸಹಾಯವಾಣಿ 080-61914960ಗೆ ಕರೆ ಮಾಡಿದರೆ, ದಿನಸಿ, ತರಕಾರಿ, ಔಷಧಿ ಮುಂತಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸಲಾಗುತ್ತದೆ. ಇದಕ್ಕೆ ಹೆಚ್ಚುವರಿಯಾಗಿ ರೂ.10 ಸೇವಾ ಶಲ್ಕ ಪಡೆಯಲಾಗುತ್ತದೆ. ಖಾಸಗಿ ಏಜೆನ್ಸಿಯ ಸಹಯೋಗದಲ್ಲಿ ಅಗತ್ಯ ವಸ್ತುಗಳನ್ನು ನೀಡಲಾಗುತ್ತದೆ. ಇದಕ್ಕಾಗಿ 5 ಸಾವಿರ ಜನರನ್ನು ಬಳಸಿಕೊಳ್ಲಲಾಗುತ್ತಿದೆ. ಈ ಸೇವೆಯನ್ನು ಒದಗಿಸಲು 18 ಸಾವಿರ ವರ್ತಕರ ಜೊತೆಗೆ ಮಾತುಕತೆ ನಡೆಸಿ ನೋಂದಾಯಿಸಿಕೊಳ್ಳಲಾಗಿದೆ. 

ಪಾಲಿಕ ಆರಂಭಿಸಿರುವ ನೂತನ ಸೇವೆಗೆ ಮುಖ್ಯಂತ್ರಿ ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಚಾಲನೆ  ನೀಡಿದರು. 

ನಗರದ ಜನತೆಗೆ ಅಗತ್ಯ ವಸ್ತುಗಳನ್ನು ತಲುಪಿಸುವ ಉದ್ದೇಶದಿಂದ ಬಿಬಿಎಂಪಿ ಆರಂಭಿಸಿರುವ ಹೋಂ ಡೆಲಿವರಿ ಸಹಾಯವಾಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT