ಪೌರ ಕಾರ್ಮಿಕ 
ರಾಜ್ಯ

ಮಂಡ್ಯ: ಕೊರೋನಾ ನಿಯಂತ್ರಣಕ್ಕೆ ಔಷಧಿ ಸಿಂಪಡಿಸುತ್ತಿದ್ದ ಪೌರಕಾರ್ಮಿಕ ಸಾವು

ಕೊರೋನಾ ನಿಯಂತ್ರಣಕ್ಕಾಗಿ ಔಷಧಿ ಸಿಂಪಡಣೆ ವೇಳೆ ಪೌರಕಾರ್ಮಿಕ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ಕೊರೋನಾ ನಿಯಂತ್ರಣಕ್ಕಾಗಿ ಔಷಧಿ ಸಿಂಪಡಣೆ ವೇಳೆ ಪೌರಕಾರ್ಮಿಕ ಸಾವಿಗೀಡಾದ ಘಟನೆ ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಡೆದಿದೆ.

ಕಲ್ಕುಣಿ ಗ್ರಾಮ ಪಂಚಾಯತಿಯ ಡಿ ಗ್ರೂಪ್ ನೌಕರ ಬಸವರಾಜು(೪೬) ಎಂಬಾತನೇ ಮೃತವ್ಯಕ್ತಿಯಾಗಿದ್ದಾನೆ. 

ಘಟನೆ ವಿವರ: ಕಳೆದ ಕೆಲವು ದಿನಗಳಿಂದ ಕಲ್ಕುಣಿ ಪಂಚಾಯ್ತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಕರೋನಾ ಸೋಂಕು ಹರಡದಂತೆ ಔಷಧಿ ಸಿಂಪಡಿಸುವ ಸಿಬ್ಬಂದಿಗಳ ಜೊತೆ ಕೆಲಸ ಮಾಡುತ್ತಾ ಅವರಿಗೆ ಮಾರ್ಗದರ್ಶಕರಾಗಿ  ಕಾರ್ಯನಿರ್ವಹಿಸುತ್ತಿದ್ದರು.

ಔಷಧಿ ಸಿಂಪಡಿಸುವ ವೇಳೆ ಬಸವರಾಜು ಅವರಿಗೆ ದೇಹದಲ್ಲಿ ಔಷಧದ ಅಡ್ಡಪರಿಣಾಮ ಉಂಟಾಗಿದ್ದು. ಅಸ್ವಸ್ಥರಾಗಿದ್ದ ಅವರನ್ನು ನಿನ್ನೆ ಮಂಡ್ಯಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ, ಅಷ್ಟರಲ್ಲಾಗಲೀ ರಕ್ತಕ್ಕೆ ಪ್ರಬಲ ರಾಸಾಯನಿಕಗಳು ಸೇರಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ೧ ಗಂಟೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ. 

ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಮೃತ ನೌಕರನ ಕುಟುಂಬಕ್ಕೆ ಸೂಕ್ತ ಪರಿಹಾರ ನಿಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವರದಿ: ನಾಗಯ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!